Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 11:22 - ಕನ್ನಡ ಸತ್ಯವೇದವು C.L. Bible (BSI)

22 “ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆದು, ಅವರನ್ನೇ ಹೊಂದಿಕೊಂಡಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು ಆತನನ್ನೇ ಹೊಂದಿಕೊಂಡಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಅನುಸರಿಸಬೇಕೆಂದು ಹೇಳುವ ಪ್ರತಿಯೊಂದು ಕಟ್ಟಳೆಗಳಿಗೆ ವಿಧೇಯರಾಗಿರಿ. ನಿಮ್ಮ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲಿ ನಡೆದು ಆತನಿಗೆ ನಂಬಿಗಸ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಎಚ್ಚರಿಕೆಯಿಂದ ಕಾಪಾಡಿ, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರನ್ನು ಅಂಟಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 11:22
13 ತಿಳಿವುಗಳ ಹೋಲಿಕೆ  

ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ,


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ನೇಮಿಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.


ಅಂಟಿಕೊಂಡಿರುವೆನು ನಿನ್ನ ಕಟ್ಟಳೆಗಳಿಗೆ I ಆಶಾಭಂಗಪಡಿಸಬೇಡ ಪ್ರಭು ನನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು