Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:17 - ಕನ್ನಡ ಸತ್ಯವೇದವು C.L. Bible (BSI)

17 “ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನು, ದನಕುರಿಗಳ ಚೊಚ್ಚಲು ಮರಿಗಳನ್ನು, ಹರಕೆಮಾಡಿದ ಪದಾರ್ಥಗಳನ್ನು, ಕಾಣಿಕೆಗಳನ್ನು ಹಾಗು ಯಾಜಕರಿಗಾಗಿ ಪ್ರತ್ಯೇಕಿಸಿದ ಪದಾರ್ಥಗಳನ್ನು ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆಗಳ ದಶಮಾಂಶವನ್ನೂ, ನಿಮ್ಮ ದನಕುರಿಗಳ ಚೊಚ್ಚಲಾದವುಗಳನ್ನೂ, ನೀವು ಮಾಡುವ ಎಲ್ಲಾ ಹರಕೆಯ ಪದಾರ್ಥಗಳನ್ನೂ, ನಿಮ್ಮ ಉಚಿತವಾದ ಕಾಣಿಕೆಗಳನ್ನೂ, ಯಾಜಕರಿಗೆ ಪ್ರತ್ಯೇಕಿಸಿದ ಅರ್ಪಣೆಗಳನ್ನೂ ನಿಮ್ಮ ಊರುಗಳಲ್ಲಿ ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:17
11 ತಿಳಿವುಗಳ ಹೋಲಿಕೆ  

ನಾವು ಸತ್ತವರಿಗಾಗಿ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದು ಹಾಕಲಿಲ್ಲ; ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಟ್ಟು ನೀವು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.


“ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.


“ಆದರೆ ನಿಮ್ಮ ಬಳಿಯಿರುವ ದೇವರ ವಸ್ತುಗಳನ್ನು ಹಾಗು ಹರಕೆಮಾಡಿದ್ದನ್ನೂ ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗುತ್ತಾರಷ್ಟೆ.


ಎಲ್ಕಾನನು ಬಲಿಯರ್ಪಿಸಿದಾಗಲೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲ ಗಂಡು-ಹೆಣ್ಣು ಮಕ್ಕಳಿಗೂ ಬಲಿಭೋಜನದ ಒಂದೊಂದು ಭಾಗವನ್ನು ಕೊಡುತ್ತಿದ್ದನು.


ಪೂರ್ವದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ಲನ ಮಗ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅದು ಮಾತ್ರವಲ್ಲ, ಸರ್ವೇಶ್ವರನಿಗೆ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು