Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:23 - ಕನ್ನಡ ಸತ್ಯವೇದವು C.L. Bible (BSI)

23 “ಆದರೆ ರಕ್ತ ಜೀವಾಧಾರವಾದುದರಿಂದ ಮಾಂಸದೊಡನೆ ರಕ್ತವನ್ನು ಸೇವಿಸಲೇಕೂಡದೆಂಬುದನ್ನು ಜ್ಞಾಪಕದಲ್ಲಿಡಿ. ಮಾಂಸದೊಡನೆ ಅದರ ಜೀವಾಧಾರವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ರಕ್ತವು ಜೀವಾಧಾರವಾದದರಿಂದ ಮಾಂಸದೊಡನೆ ರಕ್ತವನ್ನು ಭುಜಸಲೇ ಕೂಡದೆಂಬದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ರಕ್ತವನ್ನು ಮಾತ್ರ ಭುಜಿಸದ ಹಾಗೆ ಜಾಗ್ರತೆಯಾಗಿರಿ. ಏಕೆಂದರೆ ರಕ್ತವು ಪ್ರಾಣವೇ. ಮಾಂಸದೊಡನೆ ಅದರ ಜೀವವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:23
17 ತಿಳಿವುಗಳ ಹೋಲಿಕೆ  

ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.


ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು.


ರಕ್ತವನ್ನು ಮಾತ್ರ ಸೇವಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ಪಕ್ಷಿಯದಾಗಲಿ, ಪ್ರಾಣಿಯದಾಗಲಿ ಯಾವ ರಕ್ತವನ್ನೂ ನೀವು ಎಲ್ಲಿಯೂ ಊಟಮಾಡಬಾರದು.


“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.


“ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ.


ಜಿಂಕೆ ದುಪ್ಪಿಗಳನ್ನು ಶುದ್ಧರೂ ಅಶುದ್ಧರೂ ತಿನ್ನುವ ಪ್ರಕಾರ ದನಕುರಿಗಳನ್ನೂ ತಿನ್ನಬಹುದು.


ಅದನ್ನು ಭುಜಿಸದೆ ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ನೀವು ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.


ಆದ್ದರಿಂದ ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸದೊಡನೆ ರಕ್ತವನ್ನೂ ತಿಂದರು.


ಆಗ ಕೆಲವರು ಸೌಲನಿಗೆ, “ನೋಡಿ, ಜನರು ರಕ್ತವನ್ನು ಭುಜಿಸಿ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡುತ್ತಿದ್ದಾರೆ,” ಎಂದು ತಿಳಿಸಿದರು. ಅವನು, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ಒಂದು ದೊಡ್ಡ ಕಲ್ಲನ್ನು ಹೊರಳಿಸಿ ತಂದಿಡಿ;


“ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು