Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:1 - ಕನ್ನಡ ಸತ್ಯವೇದವು C.L. Bible (BSI)

1 “ನಿಮ್ಮ ಮಧ್ಯೆ ಯಾವ ಪ್ರವಾದಿಯೆ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವ ಪ್ರವಾದಿಯಾಗಲಿ ಕನಸುಕಂಡವನಾಗಲಿ ನಿಮ್ಮ ಮಧ್ಯದಲ್ಲಿ ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆಮಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಒಬ್ಬ ಪ್ರವಾದಿಯಾಗಲಿ ಕನಸಿನ ಅರ್ಥ ಹೇಳುವವನಾಗಲಿ ನಿಮ್ಮ ಬಳಿಗೆ ಬಂದು ನಿಮಗೊಂದು ಸೂಚಕಕಾರ್ಯವನ್ನಾಗಲಿ ಅದ್ಭುತಕಾರ್ಯವನ್ನಾಗಲಿ ಮಾಡಿತೋರಿಸುತ್ತೇನೆ ಎಂದು ಹೇಳಿದರೂ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮ ಮಧ್ಯೆ ಯಾವ ಪ್ರವಾದಿಯೇ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:1
27 ತಿಳಿವುಗಳ ಹೋಲಿಕೆ  

ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.


“ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.


ಆ ಅಧರ್ಮಿ ಸೈತಾನನ ಶಕ್ತಿಯೊಂದಿಗೆ ಬರುವನು. ಮೋಸಗೊಳಿಸುವ ಎಲ್ಲಾ ಬಗೆಯ ಪವಾಡಗಳನ್ನು, ಚಮತ್ಕಾರಗಳನ್ನು ಮತ್ತು ಶಕ್ತಿಯುತ ಕಾರ್ಯಗಳನ್ನು ಮಾಡಿತೋರಿಸುವನು.


ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಆ ದಿನದಲ್ಲಿ ಯಾವ ಪ್ರವಾದಿಯೂ ತನಗಾಗಿರಬಹುದಾದ ದರ್ಶನಗಳನ್ನು ಪ್ರಕಟಿಸಲು ಹೆಮ್ಮೆಪಡುವುದಿಲ್ಲ. ಪ್ರವಾದಿಯಂತೆ ನಟಿಸುವುದಿಲ್ಲ. ಪ್ರವಾದಿಯ ವೇಷವನ್ನು ಧರಿಸುವುದಿಲ್ಲ.


ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”


“ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು ! ನನ್ನಾಲಯದಲ್ಲೆ ಅವರು ನಡೆಸುವ ಕೆಟ್ಟತನವನ್ನು ನಾನು ಕಂಡಿರುವೆನು.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕೆಂದು ಸರ್ವೇಶ್ವರ ಯೆರೆಮೀಯನಿಗೆ ಅಪ್ಪಣೆಕೊಟ್ಟರು:


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.


ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.


ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿಬಂದೀಯೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು