Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:8 - ಕನ್ನಡ ಸತ್ಯವೇದವು C.L. Bible (BSI)

8 ನೀವು ಸಮ್ಮತಿಸಲೂ ಬಾರದು; ಕಿವಿಗೊಡಲೂ ಬಾರದು. ಅಂಥವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಬದಲಿಗೆ ಕೊಲ್ಲಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಕೊಲ್ಲಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎಂದರೆ ಆ ವ್ಯಕ್ತಿಯ ಸಲಹೆಗೆ ನೀವು ಒಪ್ಪಬಾರದು. ಅವನಿಗೆ ಕಿವಿಗೊಡಬೇಡಿ; ಅವನಿಗೆ ಕನಿಕರತೋರಬೇಡಿ; ಅವನು ಸ್ವತಂತ್ರನಾಗಿ ಹೋಗಲು ಬಿಡಬೇಡಿ; ಅವನನ್ನು ಸಂರಕ್ಷಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಅವರಿಗೆ ಸಮ್ಮತಿಸಬಾರದು. ಅವರ ಮಾತನ್ನು ಕೇಳಬಾರದು. ನೀವು ಅವರನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:8
13 ತಿಳಿವುಗಳ ಹೋಲಿಕೆ  

ಮಗನೇ, ಪಾಪಿಗಳ ಪ್ರೇರಣೆಗೆ ಒಪ್ಪಿಗೆ ಕೊಡಲೇಬೇಡ.


ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.


ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.


ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.


ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾಗಿದ್ದರೂ ದೂರವಾದವರ ದೇವರುಗಳಾಗಿದ್ದರೂ ಭೂಲೋಕದ ಯಾವ ಭಾಗದವರ ದೇವರುಗಳಾಗಿದ್ದರೂ


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಬಲಿಯನರ್ಪಿಸಿದರು ನೂತನಾ ದೇವತೆಗಳಿಗೆ, ದೇವರಲ್ಲದಾ ಅಸುರರಿಗೆ, ಪಿತೃಗಳು ಭಜಿಸದಾ, ತಮಗೇ ತಿಳಿಯದಾ ಹೊಸ ದೇವತೆಗಳಿಗೆ.


ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು