Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:29 - ಕನ್ನಡ ಸತ್ಯವೇದವು C.L. Bible (BSI)

29 ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಊರಲ್ಲಿರುವ ಅನ್ಯದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆಹೋದ ಲೇವಿಯರೂ ಉಂಡು ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:29
30 ತಿಳಿವುಗಳ ಹೋಲಿಕೆ  

ಕೊಡುವಾಗ ನೀವು ಬೇಸರಗೊಳ್ಳದೆ ಉದಾರ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲೂ ಪ್ರಯತ್ನಗಳಲ್ಲೂ ನಿಮ್ಮನ್ನು ಅಭಿವೃದ್ಧಿಪಡಿಸುವರು.


ಲೇವಿಯರಿಗೆ ನಿಮ್ಮ ಹಾಗೆ ಯಾವ ಸ್ವಂತ ಸೊತ್ತು ಇಲ್ಲವಾದುದರಿಂದ ನೀವು ಅವರನ್ನು ಕೈಬಿಡಬಾರದು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಅಳತೆಯಿಲ್ಲದೆ ಕೊಡುವವನು ಧನಾಢ್ಯನಾಗುವನು; ಕೊಡಬೇಕಾದುದನ್ನೂ ಬಿಗಿಹಿಡಿದವನು ಬಡವನಾಗುವನು.


ದಿಕ್ಕಿಲ್ಲದವನನು ಲಕ್ಷಿಸುವವನು ಧನ್ಯನು I ಆಪತ್ಕಾಲದಲಿ ಆದವನನು ಪ್ರಭು ರಕ್ಷಿಸುವನು II


ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


ಇದಲ್ಲದೆ ಸರ್ವೇಶ್ವರ ಆರೋನನಿಗೆ ಹೀಗೆಂದರು: “ಇಸ್ರಯೇಲರ ನಾಡಿನಲ್ಲಿ ನಿನ್ನ ಸ್ವಂತ ಸೊತ್ತಾಗಿ ಯಾವ ಆಸ್ತಿಯೂ ಇರುವುದಿಲ್ಲ; ಅವರೊಂದಿಗೆ ನಿನಗೆ ಯಾವ ಪಾಲೂ ಇರುವುದಿಲ್ಲ. ಇಸ್ರಯೇಲರ ನಡುವೆ ನಾನೇ ನಿನಗೆ ಆಸ್ತಿಪಾಸ್ತಿ, ಪಾಲುಪಸುಗೆ.”


ನೀನು ಕಟ್ಟದ ಸುಂದರವಾದ ದೊಡ್ಡ ಪಟ್ಟಣಗಳನ್ನು, ನೀನು ಕೂಡಿಸದ ಉತ್ತಮೋತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನು, ನೀನು ತೋಡದ ನೀರುಗುಂಡಿಗಳನ್ನು, ನೀನು ಬೆಳಸದ ದ್ರಾಕ್ಷಿತೋಟಗಳನ್ನು ಹಾಗು ಎಣ್ಣೆಮರಗಳನ್ನು ಅನುಭವಿಸುತ್ತಾ ತೃಪ್ತನಾಗಿ ಇರುವೆ.


ಆದುದರಿಂದ ಮಿಕ್ಕ ಇಸ್ರಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ವಾಸ್ತ್ಯ ದೊರಕಲಿಲ್ಲ. ನಿಮ್ಮ ದೇವರಾದ ಸರ್ವೇಶ್ವರ ಅವರಿಗೆ ಹೇಳಿದಂತೆ ಸರ್ವೇಶ್ವರಸ್ವಾಮಿಯೇ ಅವರ ಸೊತ್ತು.


ವಧಿಸುತಿಹರು ವಿಧವೆಯರನು, ಪರದೇಶಿಯರನು I ಹತ್ಯಮಾಡುತಿಹರು ಗತಿಯಿಲ್ಲದ ಅನಾಥರನು II


ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.


“ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.


ಅಂಥವನನು ಪ್ರಭು ಜೀವದಿಂದಿರಿಸುವನು, ಸುರಕ್ಷಿತವಾಗಿಡುವನು I ನಾಡಿನಲ್ಲವನನು ಧನ್ಯನಾಗಿಸುವನು, ಶತ್ರುಗಳಿಗಧೀನನಾಗಿಸನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು