Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:10 - ಕನ್ನಡ ಸತ್ಯವೇದವು C.L. Bible (BSI)

10 ಕೊಡುವಾಗ ನೀವು ಬೇಸರಗೊಳ್ಳದೆ ಉದಾರ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲೂ ಪ್ರಯತ್ನಗಳಲ್ಲೂ ನಿಮ್ಮನ್ನು ಅಭಿವೃದ್ಧಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೊಡುವಾಗ ಬೇಸರಗೊಳ್ಳದೇ ಉದಾರಮನಸ್ಸಿನಿಂದ ಕೊಡಿರಿ. ಏಕೆಂದರೆ ಇದಕ್ಕೋಸ್ಕರವೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ, ನೀವು ಕೈಹಾಕುವುದೆಲ್ಲದರಲ್ಲಿಯೂ ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:10
21 ತಿಳಿವುಗಳ ಹೋಲಿಕೆ  

ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.


ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


“ನೀವು ಬೆಳೆಯನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರಲು ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ; ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲಿ ಕೈಗೂಡಿಸಿ ನಿಮ್ಮನ್ನು ಅಭಿವೃದ್ಧಿಪಡಿಸುವರು.


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ, ಸರ್ವೇಶ್ವರ ನಿಮಗೆ ಸ್ವದೇಶವಾಗಿ ಕೊಡುವ ನಾಡಿನಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವರು. ಈ ಕಾರಣ, ನಿಮ್ಮಲ್ಲಿ ಬಡವರೇ ಇರುವುದಿಲ್ಲ.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


“ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವು ನಿಮಗೆ ಅಶುದ್ಧ; ಅವುಗಳನ್ನು ತಿನ್ನಕೂಡದು.


ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಕೈಗೂಡಿಸಿ ಅಭಿವೃದ್ಧಿಪಡಿಸುವರು.


“ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.


ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು.


“ಗುಲಾಮನನ್ನು ಬಿಡುಗಡೆ ಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ಗುಲಾಮನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲವೆ? ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು