Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:7 - ಕನ್ನಡ ಸತ್ಯವೇದವು C.L. Bible (BSI)

7 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:7
15 ತಿಳಿವುಗಳ ಹೋಲಿಕೆ  

ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.


ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?


ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ.


ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”


“ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.


“ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ನೀವು ಅವನನ್ನು ನಿಮ್ಮ ನಡುವೆ ತಂಗಿರುವ ಆಗಂತುಕನೆಂದು ಭಾವಿಸಿ ಸಹಾಯಮಾಡಬೇಕು.


ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ.


“ಸ್ವದೇಶದವರಲ್ಲೇ ಆಗಲಿ, ನಿಮ್ಮಲ್ಲಿ ಇರುವ ಅನ್ಯದೇಶದವರಲ್ಲೇ ಆಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ ನೀವು ಏನೂ ಅನ್ಯಾಯ ಮಾಡಬಾರದು;


ಕೆಲವು ದಿನಗಳ ನಂತರ ಜನಸಾಮಾನ್ಯರು ಹಾಗು ಅವರ ಹೆಂಡತಿಯರು ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧ ಕಟುವಾಗಿ ಗುಣುಗುಟ್ಟತೊಡಗಿದರು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.


ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.


ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು