Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:13 - ಕನ್ನಡ ಸತ್ಯವೇದವು C.L. Bible (BSI)

13 “ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಪರ್ಣಕುಠೀರಗಳ ಜಾತ್ರೆಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಕಣಗಳ ಕೆಲಸ ಮತ್ತು ದ್ರಾಕ್ಷಿಯ ಆಲೆಗಳ ಕೆಲಸ ಮುಕ್ತಾಯವಾಗಿ ನಿಮ್ಮ ಮನೆಗಳಲ್ಲಿ ಅವುಗಳನ್ನು ಶೇಖರಿಸಿದ ಬಳಿಕ ಏಳು ದಿನಗಳ ನಂತರ ನೀವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಕಣದ ಕೆಲಸವನ್ನೂ ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಗುಡಾರಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:13
14 ತಿಳಿವುಗಳ ಹೋಲಿಕೆ  

“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.


ಯೆಹೂದ್ಯರ ಪರ್ಣಕುಟೀರಗಳ ಹಬ್ಬವು ಹತ್ತಿರವಾಗುತ್ತಿತ್ತು. ಯೇಸುವಿನ ಸೋದರರು,


ಇಸ್ರಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಕೂಡಿಬಂದರು.


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಕುಟೀರಗಳ ಜಾತ್ರೆಯನ್ನು ಆಚರಿಸಿ, ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ದಹನಬಲಿಗಳನ್ನರ್ಪಿಸಿದರು.


ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.


ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ, ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ, ಪರ್ಣಕುಟೀರ ಜಾತ್ರೆಯಲ್ಲಿ


“ಹೊಸ ಗೋದಿ ಬೆಳೆಯ ಪ್ರಥಮ ಸಮರ್ಪಣೆಯ, ಅಂದರೆ (ಪಾಸ್ಕವಾದ ಏಳು) ವಾರಗಳ ಮೇಲೆ ನೀವು ಸುಗ್ಗಿಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಬೆಳೆ ಒಕ್ಕಣೆಯ ಹಬ್ಬವನ್ನು ಆಚರಿಸಬೇಕು.


ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಕಿಂಚಿತ್ತನ್ನು ಸರ್ವೇಶ್ವರನಿಗೆಂದು ಮೀಸಲಾಗಿಡುವಂತೆಯೆ ಆ ಕಣಕದಿಂದ ಮಾಡುವ ಮೊದಲ ರೊಟ್ಟಿಯನ್ನು ಮೀಸಲಾಗಿಡಬೇಕು.


ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು