Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:8 - ಕನ್ನಡ ಸತ್ಯವೇದವು C.L. Bible (BSI)

8 ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನ ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಸಭೆಸೇರಬೇಕು. ಆ ದಿನದಲ್ಲಿ ಯಾವ ದುಡಿಮೆಯನ್ನೂ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನ ಘನಕ್ಕಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:8
9 ತಿಳಿವುಗಳ ಹೋಲಿಕೆ  

ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು.


ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ತರುವಾಯ ಎಂಟನೆಯ ದಿನದಲ್ಲಿ ಸಭೆಸೇರಿದರು. ಹೀಗೆ ಏಳು ದಿವಸ ಬಲಿಪೀಠ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡೆಸಿದರು.


ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು.


ಏಳನೆಯ ದಿನದಲ್ಲೂ ಸಭೆ ಕೂಡಬೇಕು. ಆ ದಿನದಂದು ಯಾವ ದುಡಿಮೆಯನ್ನೂ ಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು