Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:1 - ಕನ್ನಡ ಸತ್ಯವೇದವು C.L. Bible (BSI)

1 “ಯಾವುದಾದರೊಂದು ಕುಂದುಕೊರತೆಯಾಗಲಿ, ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಅವರು ಸಹಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕುಂದು ಕೊರತೆಯಾಗಲಿ ಯಾವ ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವದು ಆತನಿಗೆ ಅಸಹ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಿಮ್ಮ ದೇವರಾದ ಯೆಹೋವನಿಗೆ ನೀವು ಪಶುಗಳನ್ನಾಗಲಿ ಆಡುಕುರಿಮರಿಗಳನ್ನಾಗಲಿ ಸಮರ್ಪಿಸುವಾಗ ಅವು ಕಳಂಕವಿಲ್ಲದೆ ಪೂರ್ಣಾಂಗವಾಗಿರಬೇಕು; ದೋಷಪೂರಿತ ಯಜ್ಞವನ್ನು ಆತನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:1
19 ತಿಳಿವುಗಳ ಹೋಲಿಕೆ  

“ಅದು ಕುಂಟಾಗಿ, ಕುರುಡಾಗಿ, ಇಲ್ಲವೆ ಬೇರೆ ವಿಧದಲ್ಲಿ ದೋಷವುಳ್ಳದ್ದಾಗಿದ್ದರೆ ಅದನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯಾಗಿ ಸಮರ್ಪಿಸಕೂಡದು;


ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’


ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.


ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಪರಿಗ್ರಹಿಸಬಾರದು; ಅವಳು ಅಶುದ್ಧಳಾದವಳು; ಅವಳನ್ನು ಪುನಃ ಪರಿಗ್ರಹಿಸುವುದು ಸರ್ವೇಶ್ವರನಿಗೆ ಹೇಯಕಾರ್ಯ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿಗೆ ದೋಷವುಂಟಾಗಲು ಅವಕಾಶಕೊಡಬೇಡಿ.


ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.


ಸರ್ವೇಶ್ವರ ಹಗೆಮಾಡುವಂಥಹವು ಆರು: ಆತ ಖಂಡನೆ ಮಾಡುವಂಥಹವು ಏಳು: ಅಹಂಕಾರ ದೃಷ್ಟಿ, ಕಪಟವಾಡುವ ನಾಲಿಗೆ, ನಿರಪರಾಧಿಯನ್ನು ಕೊಲೆಮಾಡುವ ಕೈ, ದುರಾಲೋಚನೆಯನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತವಕಪಡುವ ಕಾಲು, ಅಸತ್ಯವನ್ನು ಉಸುರುವ ಸುಳ್ಳುಸಾಕ್ಷಿ, ಸೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ನ್ಯಾಯ ವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾಗಿದ್ದಾರೆ.


ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.


ಅವುಗಳ ಹಿಂದೆಯೆ ಬಹಳ ಒಣಕಲಾದ ಹಾಗೂ ಸಣಕಲಾದ, ಬೇರೆ ಏಳು ಬಡಹಸುಗಳು ಬಂದವು. ಅಂಥ ಬಡಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಲ್ಲೂ ನೋಡಿದ್ದಿಲ್ಲ.


ಕಳ್ಳ ಕಲ್ಲುತೂಕಗಳನ್ನೂ ಕಳ್ಳ ಅಳತೆಪಾತ್ರೆಗಳನ್ನೂ ಬಳಸುವವರನ್ನು ಕಂಡರೆ ಸರ್ವೇಶ್ವರನಿಗೆ ಅಸಹ್ಯ.


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು, ವರ್ಷದ ಏಳು ಕುರಿ ಇವುಗಳನ್ನು ಹಾಗು


“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು