Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:14 - ಕನ್ನಡ ಸತ್ಯವೇದವು C.L. Bible (BSI)

14 “ನಿಮ್ಮ ದೇವರಾದ ಸರ್ವೇಶ್ವರ, ನಿಮಗೆ ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿರುವಾಗ ‘ಸುತ್ತಲಿರುವ ಎಲ್ಲ ಜನಾಂಗಗಳಂತೆ ನಾವೂ ಒಬ್ಬ ಅರಸನನ್ನು ನೇಮಿಸಿಕೊಳ್ಳೋಣ’ ಎಂದು ಹೇಳಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ - ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇವಿುಸಿಕೊಳ್ಳೋಣ ಎಂದು ಹೇಳಿಕೊಳ್ಳುವ ಪಕ್ಷಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಪ್ರವೇಶಿಸುವಿರಿ. ಆ ಸ್ಥಳಗಳನ್ನು ಸ್ವಾಧೀನಪಡಿಸಿಕೊಂಡು ಅಲ್ಲಿ ನೆಲೆಸುವಿರಿ. ಆಗ ನೀವು ‘ನಮ್ಮ ಸುತ್ತಲಿನ ದೇಶದಲ್ಲಿರುವಂತೆಯೇ ನಮಗೂ ಒಬ್ಬ ರಾಜನು ಬೇಕು’ ಎಂದು ಹೇಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:14
17 ತಿಳಿವುಗಳ ಹೋಲಿಕೆ  

ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.


“ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ.


ಈಜಿಪ್ಟ್ ದೇಶದಿಂದ ಕರೆದುತಂದು ಹಾಲೂಜೇನೂ ಹರಿಯುವ ಈ ನಾಡನ್ನು ನಮಗೆ ಕೊಟ್ಟಿದ್ದಾರೆ.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲು ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟಬೇಕಾಗಿದೆ. ನೀವು ಆ ನಾಡನ್ನು ವಶಪಡಿಸಿಕೊಂಡು, ಅದರಲ್ಲಿ ವಾಸಮಾಡುವಾಗ,


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


“ನಿಮಗೆ ಸ್ವದೇಶವಾಗಿ ನಾನು ಕೊಡುವ ಕಾನಾನ್ ನಾಡಿಗೆ ನೀವು ಬಂದ ನಂತರ ಆ ನಾಡಿನ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಸೂಚಿಸುತ್ತೇನೋ


ನಾನು ಆ ನಾಡನ್ನು ನಿಮಗೆ ಸ್ವಂತ ನಾಡಾಗಲೆಂದು ಕೊಟ್ಟಿದ್ದೇನೆ. ಆದ್ದರಿಂದ ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲೇ ವಾಸಮಾಡಿ.


ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ; ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವರ ರಥಗಳ ಮುಂದೆ ಓಡಬೇಕಾಗುವುದು.


ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.


ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಸರ್ವೇಶ್ವರನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ಆಮೇಲೆ ನೀನು ಮಾಡಬೇಕಾದುದನ್ನು ನಾನೇ ತಿಳಿಸುತ್ತೇನೆ; ನಾನು ಯಾರನ್ನು ತೋರಿಸುತ್ತೇನೋ ಅವನನ್ನೇ ನೀನು ಅಭಿಷೇಕಿಸಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು