Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:14 - ಕನ್ನಡ ಸತ್ಯವೇದವು C.L. Bible (BSI)

14 ನೀವು ಸ್ವಾಧೀನಮಾಡಿಕೊಳ್ಳುವ ಆ ನಾಡಿನ ಜನಾಂಗಗಳು ಶಕುನಗಳನ್ನು ನೋಡುತ್ತಾರೆ, ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಸರ್ವೇಶ್ವರನ ಅನುಮತಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ. ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆ ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಿಮ್ಮ ದೇಶದೊಳಗಿಂದ ಇತರ ಜನಾಂಗದವರನ್ನು ನಾಶಮಾಡಬೇಕು. ಆ ಜನರು ಮಾಟಮಂತ್ರಗಳ ಮೂಲಕ ಮತ್ತು ಕಣಿ ಹೇಳುವವರಿಂದ ತಮ್ಮ ಭವಿಷ್ಯವನ್ನು ವಿಚಾರಿಸುವರು. ಆದರೆ ನಿಮ್ಮ ದೇವರಾದ ಯೆಹೋವನು ಅಂಥಾ ಕೆಲಸವನ್ನು ಮಾಡಲು ನಿಮ್ಮನ್ನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಶಕುನ ನೋಡುವವರ ಹಾಗೂ ಕಣಿಹೇಳುವವರ ಮಾತನ್ನು ಕೇಳುತ್ತಿದ್ದರು. ನಿಮ್ಮನ್ನಾದರೋ ನಿಮ್ಮ ದೇವರಾದ ಯೆಹೋವ ದೇವರು ಹಾಗೆ ಮಾಡಲು ಅನುಮತಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:14
9 ತಿಳಿವುಗಳ ಹೋಲಿಕೆ  

ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು.


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.


“ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.


ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು.


ನಿನ್ನ ನುರಿತ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನ ಮಂತ್ರವಾದಿಗಳನ್ನು ನಿರ್ಮೂಲಮಾಡುವೆನು.


ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು