Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:1 - ಕನ್ನಡ ಸತ್ಯವೇದವು C.L. Bible (BSI)

1 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿರುವ ಜನಾಂಗಗಳನ್ನು ಅಲ್ಲಿಂದ ತೆಗೆದುಹಾಕಿಬಿಡುವರು. ತರುವಾಯ ನೀವು ಆ ನಾಡನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಜನಾಂಗಗಳನ್ನು ಆತನು ನಾಶಮಾಡಿ ಬಿಟ್ಟ ತರುವಾಯ, ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅವರ ಗ್ರಾಮಗಳಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿರುವ ಜನಾಂಗಗಳನ್ನು ಆತನು ತೆಗೆದುಹಾಕಿಬಿಟ್ಟ ತರುವಾಯ ನೀವು ಆ ದೇಶವನ್ನು ಸ್ವಾಧೀನಕ್ಕೆ ತೆಗೆದುಕೊಂಡು ಅವರ ಗ್ರಾಮಗಳಲ್ಲಿಯೂ ಮನೆಗಳಲ್ಲಿಯೂ ವಾಸವಾಗಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:1
11 ತಿಳಿವುಗಳ ಹೋಲಿಕೆ  

“ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನ ಜನಾಂಗಗಳನ್ನು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮುಂದೆ ನಾಶಮಾಡಿದ ತರುವಾಯ, ನೀವು ಅವರ ನಾಡನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಿರಿ.


“ನಿನ್ನ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ನಿನ್ನ ದೇವರಾದ ಸರ್ವೇಶ್ವರ ಪ್ರಮಾಣಮಾಡಿದ ನಾಡಿಗೆ ನಿನ್ನನ್ನು ಸೇರಿಸಿದಾಗ,


“ನಿಮ್ಮ ದೇವರಾದ ಸರ್ವೇಶ್ವರ, ನಿಮಗೆ ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿರುವಾಗ ‘ಸುತ್ತಲಿರುವ ಎಲ್ಲ ಜನಾಂಗಗಳಂತೆ ನಾವೂ ಒಬ್ಬ ಅರಸನನ್ನು ನೇಮಿಸಿಕೊಳ್ಳೋಣ’ ಎಂದು ಹೇಳಿಕೊಳ್ಳಬಹುದು.


“ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ನಾಡಿನಲ್ಲೆ ನೀವು ಜೀವಮಾನ ಪರಿಯಂತರ ಅನುಸರಿಸಬೇಕಾದ ಆಜ್ಞಾವಿಧಿಗಳು ಇವು:


ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.


ಆಶ್ರಯಧಾಮಗಳಿಗಾಗಿ ಪಟ್ಟಣಗಳನ್ನು ನಿಗದಿಮಾಡಿರಿ. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.


ನೀನು ಕಟ್ಟದ ಸುಂದರವಾದ ದೊಡ್ಡ ಪಟ್ಟಣಗಳನ್ನು, ನೀನು ಕೂಡಿಸದ ಉತ್ತಮೋತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನು, ನೀನು ತೋಡದ ನೀರುಗುಂಡಿಗಳನ್ನು, ನೀನು ಬೆಳಸದ ದ್ರಾಕ್ಷಿತೋಟಗಳನ್ನು ಹಾಗು ಎಣ್ಣೆಮರಗಳನ್ನು ಅನುಭವಿಸುತ್ತಾ ತೃಪ್ತನಾಗಿ ಇರುವೆ.


ಸರ್ವೇಶ್ವರ ಮೋಶೆಗೆ ಹೇಳಿದ್ದು ಇದು:


ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಇಸ್ರಯೇಲರಿಗೆ


ನೀವು ಕೃಷಿಮಾಡದ, ಬೆಳೆ ತುಂಬಿದ ಭೂಮಿಯನ್ನು ನಿಮಗೆ ಕೊಟ್ಟೆ, ನೀವು ಕಟ್ಟದ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿ ಹಾಗೂ ಎಣ್ಣೆಮರಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ’.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು