Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:13 - ಕನ್ನಡ ಸತ್ಯವೇದವು C.L. Bible (BSI)

13 ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನನ್ನು ಇಸ್ರಾಯೇಲರಲ್ಲಿ ಉಳಿಯದಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲ್ಯರಲ್ಲಿ ಉಳಿಯದಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಅವನ ವಿಷಯದಲ್ಲಿ ದುಃಖಪಡಬಾರದು. ಯಾಕೆಂದರೆ ಅವನು ನಿರಪರಾಧಿಯನ್ನು ಕೊಂದ ಅಪರಾಧಿಯಾಗಿದ್ದಾನೆ. ಅವನು ಮಾಡಿದ ಪಾಪವನ್ನು ಇಸ್ರೇಲಿನಿಂದ ತೆಗೆದುಹಾಕಬೇಕು. ಆಗ ನಿಮಗೆ ಶುಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಅವನ ಮೇಲೆ ದಯೆ ತೋರಬಾರದು. ನಿಮಗೆ ಒಳ್ಳೆಯದಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲರಲ್ಲಿ ಉಳಿಯದಂತೆ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:13
17 ತಿಳಿವುಗಳ ಹೋಲಿಕೆ  

ಅರಸನು, “ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದುದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ಆಗ ಆ ರಕ್ತಾಪರಾಧಕ್ಕೆ ಕ್ಷಮೆ ದೊರಕುವುದು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯ ದೋಷವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವಿರಿ.


ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.


ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿಬಿಟ್ಟರು.


ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.


ಅವಳ ಕೈ ಕಡಿದುಹಾಕಿಸಬೇಕು; ಅವಳಿಗೆ ಕನಿಕರ ತೋರಿಸಬಾರದು.


ನೀವು ಸಮ್ಮತಿಸಲೂ ಬಾರದು; ಕಿವಿಗೊಡಲೂ ಬಾರದು. ಅಂಥವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಬದಲಿಗೆ ಕೊಲ್ಲಿಸಲೇಬೇಕು.


ಪಶುಪ್ರಾಣಿಯನ್ನು ಕೊಂದವನಿಗೆ ಅದಕ್ಕೆ ಬದಲಾಗಿ ಈಡುಕೊಡಬೇಕು; ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.


ಕೊಲೆ ಮಾಡಿದವನಿಗೆ ಮರಣದಂಡನೆಯಾಗಬೇಕು.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.


ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು, ಕಣ್ಣಿಗೆ ಪ್ರತಿಯಾಗಿ ಕಣ್ನನ್ನು, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು, ಕೈಗೆ ಪ್ರತಿಯಾಗಿ ಕೈಯನ್ನು, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.


ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು.


ಮರಣಶಿಕ್ಷೆಗೆ ಪಾತ್ರನಾದ ಕೊಲೆಗಡುಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆ ಆಗಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು