Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:15 - ಕನ್ನಡ ಸತ್ಯವೇದವು C.L. Bible (BSI)

15 “ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ಸ್ಥಾಪನೆಯಾಗುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಒಬ್ಬನು ಕಟ್ಟಳೆಗಳಿಗೆ ವಿರುದ್ಧವಾಗಿ ನಡೆದುಕೊಂಡು ಅಪಾದಿಸಲ್ಪಟ್ಟದ್ದಲ್ಲಿ ಒಬ್ಬನ ಸಾಕ್ಷಿಯಿಂದ ಅವನು ತಪ್ಪಿತಸ್ಥನೆಂದು ತೀರ್ಮಾನಿಸಬಾರದು. ಅವನು ತಪ್ಪಿತಸ್ಥನೆಂದು ತೋರಿಸಲು ಎರಡು ಅಥವಾ ಮೂರು ಸಾಕ್ಷಿಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:15
12 ತಿಳಿವುಗಳ ಹೋಲಿಕೆ  

“ಒಬ್ಬನು ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆ ವಿಧಿಸಬೇಕು. ಒಬ್ಬನೇ ಒಬ್ಬ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.


ನಾನು ನಿಮ್ಮ ಬಳಿಗೆ ಬರುತ್ತಿರುವುದು ಇದು ಮೂರನೆಯ ಬಾರಿ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.


ಒಬ್ಬನೇ ಒಬ್ಬ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಮೋಶೆಯ ಆಜ್ಞಾವಿಧಿಗಳನ್ನು ಉಲ್ಲಂಘಿಸಿದವನು, ಇಬ್ಬರು ಅಥವಾ ಮೂವರು ಸಾಕ್ಷಿಗಳು ನೀಡುವ ಸಾಕ್ಷ್ಯದ ಆಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆಗೆ ಗುರಿ ಆಗುತ್ತಾನೆ.


ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.


ಸಭಾಹಿರಿಯರ ವಿರುದ್ಧ ಯಾರಾದರೂ ದೂರು ತಂದರೆ, ಇಬ್ಬರ ಅಥವಾ ಮೂವರ ಸಾಕ್ಷಿ ಇಲ್ಲದೆ ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳಬೇಡ.


ಇಬ್ಬರ ಸಾಕ್ಷ್ಯ ಒಂದೇ ಆಗಿದ್ದರೆ ಅದು ಸತ್ಯವೆಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು