Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:17 - ಕನ್ನಡ ಸತ್ಯವೇದವು C.L. Bible (BSI)

17 ವ್ಯಾಜ್ಯವಾಡುವ ಆ ಇಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ, ಯಾಜಕರ ಮುಂದೆ ಹಾಗು ಆಗ ಇರುವ ನ್ಯಾಯಾಧಿಪತಿಗಳ ಮುಂದೆ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಪ್ರಕರಣಕ್ಕೆ ಸೇರಿದವರಿಬ್ಬರೂ ಯೆಹೋವನು ಆರಿಸಿದ ಸ್ಥಳಕ್ಕೆ ಹೋಗಿ ಅಲ್ಲಿ ಕಾರ್ಯತತ್ಪರರಾಗಿರುವ ಯಾಜಕರನ್ನು ಮತ್ತು ನ್ಯಾಯಾಧೀಶರನ್ನು ಕಾಣಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಯೆಹೋವ ದೇವರ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ಹಾಗು ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:17
9 ತಿಳಿವುಗಳ ಹೋಲಿಕೆ  

ಯಾಜಕಸೇವೆಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಬೇಕು. ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್‍ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ.


ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು