Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:19 - ಕನ್ನಡ ಸತ್ಯವೇದವು C.L. Bible (BSI)

19 ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು. ಹೀಗೆ, ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:19
13 ತಿಳಿವುಗಳ ಹೋಲಿಕೆ  

ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.


ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಎಸೆಯಬೇಕು. ತರುವಾಯ ಜನರೆಲ್ಲರೂ ಹಾಕಲಿ. ಹೀಗೆಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.


“ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು, ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡೆಸರು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು