Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:25 - ಕನ್ನಡ ಸತ್ಯವೇದವು C.L. Bible (BSI)

25 ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಇಂದಿನಿಂದ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:25
14 ತಿಳಿವುಗಳ ಹೋಲಿಕೆ  

ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು.


ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಭೀತಿಯಿತ್ತಾ ಈಜಿಪ್ಟರಿಗೆ ಇಸ್ರಯೇಲರ ಬಗ್ಗೆ I ಈ ಕಾರಣ ಆನಂದಿಸಿದರು ಅವರು ಹೋದುದಕ್ಕೆ II


ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ದಾವೀದನ ಹೆಸರು ಎಲ್ಲಾ ಕಡೆಗಳಲ್ಲಿ ಪ್ರಖ್ಯಾತಿಗೆ ಬಂದಿತು; ಎಲ್ಲಾ ದೇಶಗಳವರೂ ದಾವೀದನಿಗೆ ಭಯಪಡುವಂತೆ ಸರ್ವೇಶ್ವರ ಮಾಡಿದರು.


ಇಸ್ರಯೇಲರು ಬಹುಮಂದಿ ಇದ್ದುದರಿಂದ ಮೋವಾಬ್ಯರು ಬಹಳವಾಗಿ ದಿಗಿಲುಪಟ್ಟರು; ಇಸ್ರಯೇಲರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು.


ಆಯಿ ನಗರಕ್ಕಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿದ್ದ ಗಿಬ್ಯೋನ್ ನಗರದಲ್ಲಿ ಇರುವ ಜನರೆಲ್ಲರು ಯುದ್ಧವೀರರಾಗಿದ್ದರೂ ಇಸ್ರಯೇಲರ ನಡುವೆ ಜೀವದಿಂದುಳಿಯಲು ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುದನ್ನು ಕೂಡ ಕೇಳಿ ಅವನು ಬಹಳವಾಗಿ ಭಯಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು