Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:33 - ಕನ್ನಡ ಸತ್ಯವೇದವು C.L. Bible (BSI)

33 ನಮ್ಮ ದೇವರಾದ ಸರ್ವೇಶ್ವರ ಅವನನ್ನು ನಮ್ಮಿಂದ ಪರಾಜಯ ಪಡಿಸಿದರು. ನಾವು ಅವನನ್ನು, ಅವನ ಮಕ್ಕಳನ್ನು ಹಾಗು ಜನರೆಲ್ಲರನ್ನು ಸದೆಬಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ, ಅವನ ಮಕ್ಕಳನ್ನೂ ಮತ್ತು ಜನರೆಲ್ಲರನ್ನೂ ಸಂಹರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮಿಂದ ಪರಾಜಯಪಡಿಸಿದನು. ನಾವು ಅವನನ್ನೂ ಅವನ ಮಕ್ಕಳನ್ನೂ ಜನರೆಲ್ಲರನ್ನೂ ಸಂಹರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:33
14 ತಿಳಿವುಗಳ ಹೋಲಿಕೆ  

ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು.


ಸರ್ವೇಶ್ವರ ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ; ಏಕೆಂದರೆ ಹಾಗೆ ಒಪ್ಪಿಸಿಕೊಟ್ಟರೆ ಸ್ವಂತ ಶಕ್ತಿಯಿಂದಲೇ ನಮಗೆ ರಕ್ಷಣೆ ಲಭಿಸಿತು ಎಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಬಹುದು.


ಅವರು ಒಪ್ಪಿ ಯೆಹೂದ ಕುಲದವರ ಜೊತೆ ಯುದ್ಧಕ್ಕೆ ಹೋದರು. ಸರ್ವೇಶ್ವರ ಕಾನಾನ್ಯರನ್ನು ಹಾಗು ಪೆರಿಜ್ಜೀಯರನ್ನು ಅವರ ಕೈವಶ ಮಾಡಲು ಅವರು ಹತ್ತುಸಾವಿರ ಶತ್ರುಗಳನ್ನು ಬೆಜೆಕಿನಲ್ಲಿ ಸೋಲಿಸಿದರು.


ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ಇಸ್ರಯೇಲರು ಅವನ ಜನರನ್ನು ಸೋಲಿಸಿದರು, ಕತ್ತಿಯಿಂದ ಸಂಹರಿಸಿದರು. ಅರ್ನೋನ್ ಹೊಳೆಯಿಂದ ಯಬ್ಬೋಕ್ ಹೊಳೆಯವರೆಗೂ ಹಾಗೂ ಅಮ್ಮೋನಿಯರ ಎಲ್ಲೆಯವರೆಗೂ ಇದ್ದ ಸೀಹೋನನ ನಾಡನ್ನೆಲ್ಲಾ ಸ್ವಾಧೀನ ಮಾಡಿಕೊಂಡರು. ಅಮ್ಮೋನಿಯರ ಎಲ್ಲೆ ಒಂದು ದುರ್ಗವಾಗಿತ್ತು.


ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡಲು ಯಹಜಿಗೆ ಹೊರಟುಬಂದ.


ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಸರ್ವೇಶ್ವರನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.


ಅಮೋರಿಯರ ರಾಜನಾದ ಸೀಹೋನನ್ನು ಕೊಂದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು