Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:17 - ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ, ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲರನ್ನೂ ವಿನಾಶ ಶಾಪಗ್ರಸ್ತರನ್ನಾಗಿ ಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಹಿತ್ತಿಯರನ್ನು, ಅಮೋರಿಯರನ್ನು, ಕಾನಾನ್ಯರನ್ನು, ಪೆರಿಜ್ಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ಸಂಪೂರ್ಣವಾಗಿ ಹತ್ಯೆ ಮಾಡಬೇಕು. ಇದು ನಿಮ್ಮ ದೇವರಾದ ಯೆಹೋವನ ಅಪ್ಪಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಹಿತ್ತಿಯರನ್ನೂ, ಅಮೋರಿಯರನ್ನೂ, ಕಾನಾನ್ಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಪೂರ್ಣವಾಗಿ ದಂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:17
14 ತಿಳಿವುಗಳ ಹೋಲಿಕೆ  

ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.


ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ!


ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು.


ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಡಬಹುದು; ಮತ್ತು ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಬಹುದು.


ಇದೂ ಇದರಲ್ಲಿರುವುದೆಲ್ಲವೂ ಸರ್ವೇಶ್ವರನಿಗೆ ಮೀಸಲಾಗಿ ಆಹುತಿಯಾಗತಕ್ಕದೆಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಸಂಗಡ ಮನೆಯಲ್ಲಿರುವವರೆಲ್ಲರು ಉಳಿಯಲಿ. ಏಕೆಂದರೆ ನಾವು ಕಳಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.


ಹಿತ್ತಿಯರು, ಪೆರಿಜೀಯರು, ರೆಫಾಯರು,


ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.


ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.


ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು