Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:4 - ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮ್ಮ ಪರವಾಗಿ ಯುದ್ಧಮಾಡಿ, ನಿಮಗೆ ಜಯವನ್ನುಂಟುಮಾಡುವರು’ ಎಂದು ಹೇಳಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನುಂಟುಮಾಡುವನು ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗುವನು. ವೈರಿಗಳೊಂದಿಗೆ ಯುದ್ಧಮಾಡಲು ಆತನು ನಿಮಗೆ ಸಹಾಯ ಮಾಡುವನು ಮತ್ತು ನಿಮಗೆ ಜಯವನ್ನು ಕೊಡುವನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:4
15 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು.


ನೀವು ಅವರಿಗೆ ಭಯಪಡಬೇಡಿ; ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ನಿಮ್ಮ ಕಡೆಯವರಾಗಿ ಯುದ್ಧಮಾಡುವರು’ ಎಂದು ಆಜ್ಞಾಪಿಸಿದೆ.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.


ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು.


ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು.


ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ಹೀಗೆ ಸರ್ವೇಶ್ವರ ಆ ದಿನದಲ್ಲಿ ಇಸ್ರಯೇಲರಿಗೆ ಜಯವನ್ನುಂಟುಮಾಡಿದರು. ಯುದ್ಧ ಬೇತಾವೆನಿನ ಆಚೆಯ ತನಕ ನಡೆಯಿತು.


ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳುವಾಗ, ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನನಗೆ ಮುಂದಾಗಿ ಹೊರಟಿದ್ದಾರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದು ಸರ್ವೇಶ್ವರ ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು