Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:5 - ಕನ್ನಡ ಸತ್ಯವೇದವು C.L. Bible (BSI)

5 “ಮತ್ತು ಸೇನಾಧಿಪತಿಗಳು ಅವರಿಗೆ, ‘ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಗೃಹಪ್ರವೇಶಮಾಡದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮತ್ತು ಸೈನ್ಯಾಧಿಪತಿಗಳು ಅವರಿಗೆ - ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನೂ ಗೃಹಪ್ರವೇಶ ಮಾಡದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶಮಾಡಿಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆ ಲೇವಿಯ ಅಧಿಕಾರಿಗಳು ಸೈನಿಕರಿಗೆ, ‘ನಿಮ್ಮಲ್ಲಿ ಯಾರಾದರೂ ಹೊಸಮನೆಯನ್ನು ಕಟ್ಟಿ ಗೃಹಪ್ರವೇಶ ಮಾಡಿರದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಒಂದುವೇಳೆ ಅವನು ರಣರಂಗದಲ್ಲಿ ಸತ್ತರೆ ಇನ್ನೊಬ್ಬನು ಅವನ ಮನೆಗೆ ಸೇರಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮತ್ತು ಅಧಿಕಾರಿಗಳು ಅವರಿಗೆ ಹೀಗೆ ಹೇಳಬೇಕು, “ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿ, ಗೃಹ ಪ್ರತಿಷ್ಠೆ ಇನ್ನು ಮಾಡದಿದ್ದರೆ, ಅವನು ತನ್ನ ಮನೆಗೆ ಹೋಗಲಿ. ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಮನೆಯನ್ನು ಸೇರಿಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:5
8 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.


ಇಲ್ಲಿ ಹತ್ತು ಗಿಣ್ಣಿನ ಉಂಡೆಗಳೂ ಇವೆ. ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು, ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.


ಸೈನ್ಯದ ಸಹಸ್ರಾಧಿಪತಿಗಳು ಹಾಗು ಶತಾಧಿಪತಿಗಳು ಮೋಶೆ ಬಳಿಗೆ ಬಂದು,


ಯುದ್ಧಭೂಮಿಯಿಂದ ಬಂದಿದ್ದ ಆ ಸೈನ್ಯದ ಸಹಸ್ರಾಧಿಪತಿಗಳನ್ನು ಹಾಗು ಶತಾಧಿಪತಿಗಳನ್ನು ಕಂಡು ಮೋಶೆ ಕೋಪಗೊಂಡನು.


ನಿನಗೆನ್ನ ವಂದನೆ ಪ್ರಭು, ನನ್ನನುದ್ಧರಿಸಿದೆ I ಶತ್ರುಗಳೆನ್ನ ಕುರಿತು ಹಿಗ್ಗದಂತೆ ಮಾಡಿದೆ II


ಯಾವನಾದರು ದ್ರಾಕ್ಷೀತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು