Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:6 - ಕನ್ನಡ ಸತ್ಯವೇದವು C.L. Bible (BSI)

6 ಯಾವನಾದರು ದ್ರಾಕ್ಷೀತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾವನಾದರೂ ದ್ರಾಕ್ಷೇತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿಮ್ಮಲ್ಲಿ ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಫಲವನ್ನು ಕೂಡಿಸಿಲ್ಲದಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನು ರಣರಂಗದಲ್ಲಿ ಮಡಿದರೆ ಅವನ ದ್ರಾಕ್ಷಿತೋಟದ ಫಲಗಳು ಬೇರೊಬ್ಬನ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದ್ರಾಕ್ಷಿತೋಟವನ್ನು ನೆಟ್ಟು ಅದರ ಫಲವನ್ನು ತಿನ್ನದೇ ಇರುವ ಮನುಷ್ಯನು, ತನ್ನ ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಫಲ ತಿಂದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:6
8 ತಿಳಿವುಗಳ ಹೋಲಿಕೆ  

ಅವರ ಆಸ್ತಿಪಾಸ್ತಿಯೆಲ್ಲಾ ಸೂರೆಯಾಗುವುದು, ಅವರ ಮನೆಮಠಗಳು ಹಾಳಾಗುವುವು; ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು; ದ್ರಾಕ್ಷಾತೋಟಗಳನ್ನು ಬೆಳೆಸಿಕೊಂಡರೂ ಅವುಗಳಿಂದ ದ್ರಾಕ್ಷಾರಸವನ್ನು ಕುಡಿಯರು.”


ಸಮಾರಿಯದ ಗುಡ್ಡಗಳಲ್ಲಿ ಮರಳಿ ದ್ರಾಕ್ಷಾತೋಟಗಳನ್ನು ಮಾಡಿಕೊಳ್ಳುವೆ. ನೆಡುವವರೇ ನೆಟ್ಟ ಫಲಗಳನ್ನು ಸವಿಯುವರು.


ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.


ಯಾವ ಸೈನಿಕ ಸ್ವಂತ ಖರ್ಚಿನಿಂದ ಸಮರಕ್ಕೆ ನಿಲ್ಲುತ್ತಾನೆ? ಯಾವ ತೋಟಗಾರ ತನ್ನ ಸ್ವಂತ ದ್ರಾಕ್ಷಿಯ ತೋಟದಿಂದ ದ್ರಾಕ್ಷಿಯ ಫಲವನ್ನು ತಿನ್ನದಿರುತ್ತಾನೆ? ಯಾವ ಗೌಳಿಗ ತಾನು ಸಾಕಿದ ಹಸುವಿನ ಹಾಲನ್ನು ಕುಡಿಯದಿರುತ್ತಾನೆ?


“ಮತ್ತು ಸೇನಾಧಿಪತಿಗಳು ಅವರಿಗೆ, ‘ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಗೃಹಪ್ರವೇಶಮಾಡದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಂಡಾನು.


ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನು ಸೇರಿಸಿಕೊಳ್ಳದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು,’ ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು