Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:14 - ಕನ್ನಡ ಸತ್ಯವೇದವು C.L. Bible (BSI)

14 ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳು ಆಶಿಸುವಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ಹಣಕ್ಕೆ ಮಾರಲೂಬಾರದು, ಊಳಿಗದವಳಂತೆ ನಡೆಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡಿಸಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಕೆಯನ್ನು ನೀನು ಮೆಚ್ಚದಿದ್ದರೆ ವಿವಾಹವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕೆಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ, ಅವನು ಅವಳನ್ನು ಅವಳು ಬಯಸಿದ ಸ್ಥಳಕ್ಕೆ ಕಳುಹಿಸಿಬಿಡಬೇಕು. ಅವಳನ್ನು ಅವಮಾನಪಡಿಸಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡೆಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:14
7 ತಿಳಿವುಗಳ ಹೋಲಿಕೆ  

ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ಬೆಳ್ಳಿನಾಣ್ಯ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗ ಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.


ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.


ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


ಆ ಊರಿನ ಹಿರಿಯರು ಅವನನ್ನು ಹಿಡಿಸಿ, ನೂರು ಬೆಳ್ಳಿ ನಾಣ್ಯದ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು; ಮತ್ತು ಅವನು ಆ ಮಹಿಳೆಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರ ಇರುವುದಿಲ್ಲ.


ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ. ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಮಾಡಿ; ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿ,” ಎಂದನು.


“ಒಬ್ಬನಿಗೆ ಇಬ್ಬರು ಹೆಂಡತಿಯರಿದ್ದು ಅವರಲ್ಲಿ ಒಬ್ಬಳನ್ನು ಪ್ರೀತಿಸಿ ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು