Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:22 - ಕನ್ನಡ ಸತ್ಯವೇದವು C.L. Bible (BSI)

22 “ಮರಣಶಿಕ್ಷೆಗೆ ಪಾತ್ರನಾದ ಅಪರಾಧಿಯನ್ನು ಗಲ್ಲುಮರಕ್ಕೇರಿಸಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರದ ಕಂಬಕ್ಕೆ ತೂಗುಹಾಕಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಪರಾಧ ಮಾಡಿದವನು ಮರಣಶಿಕ್ಷೆಯನ್ನು ಹೊಂದಿದ ಮೇಲೆ ನೀವು ಅವನ ಶವವನ್ನು ಮರಕ್ಕೆ ತೂಗಹಾಕಿದರೆ ಅದು ರಾತ್ರಿಯಲ್ಲಿಯೂ ಮರದ ಮೇಲೆ ಇರಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಒಬ್ಬ ಮನುಷ್ಯನು ಮರಣಶಿಕ್ಷೆಗೆ ಯೋಗ್ಯವಾದ ಅಪರಾಧವನ್ನು ಮಾಡಿದ್ದಿರಬಹುದು. ಅವನಿಗೆ ಮರಣಶಿಕ್ಷೆ ಕೊಟ್ಟ ನಂತರ ಅವನ ದೇಹವನ್ನು ಒಂದು ಮರಕ್ಕೆ ತೂಗುಹಾಕಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:22
20 ತಿಳಿವುಗಳ ಹೋಲಿಕೆ  

ಅಲ್ಲಿಂದ ಹೊರಕ್ಕೆ ಹೋಗಿ, “ಮರಣದಂಡನೆಗಾಗಲಿ ಅಥವಾ ಸೆರೆಮನೆವಾಸಕ್ಕಾಗಲಿ ಗುರಿಮಾಡುವಂಥ ಯಾವ ತಪ್ಪನ್ನೂ ಈ ಮನುಷ್ಯ ಮಾಡಿಲ್ಲ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಅಲ್ಲಿ ನನಗೆ ಕಂಡುಬಂದ ಪ್ರಕಾರ ಅವರ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಇವನ ಮೇಲೆ ಆಪಾದನೆ ಹೊರಿಸಲಾಯಿತೇ ಹೊರತು ಮರಣದಂಡನೆಗಾಗಲಿ, ಸೆರೆಮನೆಗಾಗಲಿ, ಇವನನ್ನು ಗುರಿಪಡಿಸಬಹುದಾದ ಅಪರಾಧವೇನೂ ಇರಲಿಲ್ಲ.


‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು.


ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ. ಈಗ ನಿಮ್ಮ ತೀರ್ಮಾನ ಏನು?” ಎಂದು ಕೇಳಿದನು. ಅವರು, “ಇವನಿಗೆ ಮರಣದಂಡನೆ ಆಗಬೇಕು,” ಎಂದು ಉತ್ತರಕೊಟ್ಟರು.


ಆ ಮಹಿಳೆಗೆ ಯಾವ ಶಿಕ್ಷೆಯೂ ಆಗಬಾರದು. ಅವಳಲ್ಲಿ ಮರಣಶಿಕ್ಷೆಗೆ ಪಾತ್ರ ಆದ ಅಪರಾಧವೇನೂ ಇಲ್ಲ. ಒಬ್ಬ ವ್ಯಕ್ತಿ ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಹಾಗೆಯೇ ಇದು ಕೂಡ;


ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.


ಅವರೆಲ್ಲರೂ, “ಇವನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಮಾನವಿತ್ತರು.


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ಅಂತೆಯೇ ತನ್ನ ಆಳುಗಳಿಗೆ ಆಜ್ಞಾಪಿಸಿದನು. ಅವರು ಇವರನ್ನು ಕೊಂದು ಕೈಕಾಲುಗಳನ್ನು ಕತ್ತರಿಸಿ ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಇಬ್ನೇರನ ಸಮಾಧಿಯಲ್ಲಿ ಹೂಳಿದರು.


ನೀನು ಹೀಗೆ ಮಾಡುವುದು ಸರಿಯಲ್ಲ. ಸರ್ವೇಶ್ವರನಾಣೆ, ಅವರ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೆಂಬುದೇನೋ ನಿಜ. ಅರಸನ ತಲೆಯ ಬಳಿಯಲ್ಲಿದ್ದ ಭರ್ಜಿ, ತಂಬಿಗೆ ಏನಾದವೋ, ನೋಡು,” ಎಂದು ಕೂಗಿ ಹೇಳಿದನು.


ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.


ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.


ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ.


ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.


ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇವೆ.


ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು