ಧರ್ಮೋಪದೇಶಕಾಂಡ 22:21 - ಕನ್ನಡ ಸತ್ಯವೇದವು C.L. Bible (BSI)
21 ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.
21 ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.
21 ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
21 ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
21 ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.
ಇತ್ತ ಯಕೋಬನ ಗಂಡು ಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದರು. ಶೆಕೆಮನು ತಮ್ಮ ತಂಗಿಯನ್ನು ಬಲಾತ್ಕಾರದಿಂದ ಕೂಡಿ, ಮಾಡಬಾರದನ್ನು ಮಾಡಿ, ಇಸ್ರಯೇಲರಿಗೆ ಘನ ಅವಮಾನವನ್ನು ಮಾಡಿದ್ದರಿಂದ ಅವರು ತಳಮಳಗೊಂಡು ಕಡುಕೋಪದಿಂದ ಇದ್ದರು.
ಇಸ್ರಯೇಲರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರವೇ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಯೇಲರಲ್ಲಿ ನಡೆಸಿದ ದುಷ್ಕರ್ಮಕ್ಕಾಗಿ ಅವರನ್ನು ದಂಡಿಸೋಣ,” ಎಂದುಕೊಂಡರು.
ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.
ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.
ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.
ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.
ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.