Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:9 - ಕನ್ನಡ ಸತ್ಯವೇದವು C.L. Bible (BSI)

9 “ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಗೂ ಮತ್ತು ದ್ರಾಕ್ಷಿಬೆಳೆಗೂ ಹೀಗೆ ಆ ತೋಟದ ಬೆಳೆಗೂ ಗತಿಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದ್ರಾಕ್ಷೇತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಯೂ ಮತ್ತು ದ್ರಾಕ್ಷೆಯ ಬೆಳೆಯೂ ಅಂತೂ ಆ ತೋಟದ ಎಲ್ಲಾ ಬೆಳೆಯೂ ದೇವರದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕೆಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನ ದ್ರಾಕ್ಷಿತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜವೂ, ಬಿತ್ತಿದ ಬೀಜದ ಪೈರೂ, ದ್ರಾಕ್ಷಿತೋಟದ ಹುಟ್ಟುವಳಿಯೂ ಅಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:9
9 ತಿಳಿವುಗಳ ಹೋಲಿಕೆ  

“ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


“ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.


ಸ್ತುತಿ ಶಾಪಗಳೆರಡೂ ಒಂದೇ ಬಾಯಿಂದ ಹೊರಡುತ್ತವೆ. ಪ್ರಿಯ ಸಹೋದರರೇ, ಇದು ತರವಲ್ಲ.


ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.


“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


“ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು