Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:21 - ಕನ್ನಡ ಸತ್ಯವೇದವು C.L. Bible (BSI)

21 “ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:21
24 ತಿಳಿವುಗಳ ಹೋಲಿಕೆ  

ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು II


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.


“ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.


ಇದನ್ನು ಕಂಡು ಜನರು ಸರ್ವೇಶ್ವರಸ್ವಾಮಿಗೆ ಬಹುವಾಗಿ ಭಯಪಟ್ಟರು; ಯಜ್ಞವನ್ನು ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.


ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II


ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”


ನೀವು ಹರಕೆಮಾಡದಿದ್ದರೆ ದೋಷವೇನೂ ಇಲ್ಲ.


ಅಗಲಿದರೆ, ಸರ್ವೇಶ್ವರನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ!” ಎಂದು ಹೇಳಿ ಅವನ ಮನೆಯವರೊಡನೆ ಒಪ್ಪಂದ ಮಾಡಿಕೊಂಡನು.


ಆತನನು ಪ್ರಾರ್ಥಿಸುವೆ, ಆತ ಆಲಿಸುವನು ತೀರಿಸುವೆ ಆತನಿಗೆ ನೀ ಹೊತ್ತ ಹರಕೆಗಳನು.


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಸಲ್ಲಿಸುವೆನಾಗ ದಿನಬಿಡದೆ ನಿನಗೆ ಹರಕೆಗಳನು I ಸಂಕೀರ್ತಿಸುವೆನು ಸದಾ ನಿನ್ನ ಶ್ರೀನಾಮವನು II


ನಾನು ಕೋಪಗೊಂಡು ನಿಮ್ಮನ್ನು ಶತ್ರುಗಳ ಕೈಯಿಂದ ಸಂಹಾರ ಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಗಳಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟದ್ದನ್ನು ಕೇಳಕೂಡದು.


ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು