Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:6 - ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ಜೀವಮಾನಕಾಲವನ್ನೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಮ್ಮೋನಿಯರೊಂದಿಗಾಗಲಿ ಮೋವಾಬ್ಯರೊಂದಿಗಾಗಲಿ ನೀವು ಸಂಧಾನ ಮಾಡಿಕೊಳ್ಳಲೇಬಾರದು; ನಿಮ್ಮ ಜೀವಮಾನವೆಲ್ಲಾ ಅವರೊಂದಿಗೆ ಸ್ನೇಹತ್ವದಲ್ಲಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಇರುವವರೆಗೆ ಎಂದಿಗೂ ಅವರ ಏಳಿಗೆಯನ್ನು, ಕ್ಷೇಮವನ್ನು ಬಯಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:6
9 ತಿಳಿವುಗಳ ಹೋಲಿಕೆ  

ಹೀಗಿರಲಾಗಿ, ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗಾಗಿ ಅವರ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಲೂಬಾರದು. ಅವರಿಗೆ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ, ನೀವು ಬಲಗೊಂಡು, ಆ ನಾಡಿನ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತ ಸೊತ್ತನ್ನಾಗಿ ಬಿಡುವಿರಿ’ ಎಂದು ಹೇಳಿದಿರಲ್ಲವೆ?


ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರಿಗೂ ಇದೇ ಗತಿ ಆಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಇದನ್ನು ಕೇಳಿ ಬಾಲಾಕನಿಗೆ ಬಿಳಾಮನ ಮೇಲೆ ಕಡುಕೋಪ ಉಂಟಾಯಿತು. ಅವನು ಕೈಕೈಹಿಸಿಕಿಕೊಂಡು ಬಿಳಾಮನಿಗೆ, “ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆ; ಆದರೆ ನೀನು ಮೂರು ಸಾರಿಯೂ ಅವರನ್ನೇ ಆಶೀರ್ವದಿಸಿದೆ.


ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು