Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:1 - ಕನ್ನಡ ಸತ್ಯವೇದವು C.L. Bible (BSI)

1 “ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು, ಅವಳಲ್ಲಿ ಸಂತೋಷಪಡದೆ, ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಿಬಿಟ್ಟನೆಂದು ಇಟ್ಟುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಿಬಿಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಒಬ್ಬಾಕೆಯನ್ನು ಒಬ್ಬನು ಮದುವೆಯಾದ ಬಳಿಕ, ಅವಳಲ್ಲಿ ನಾಚಿಕೆಕರವಾದದ್ದೇನಾದರೂ ಇದ್ದರೆ ಅವನು ವಿವಾಹವಿಚ್ಛೇದನಾ ಪತ್ರಗಳಿಗೆ ಸಹಿಹಾಕಿ ಅವಳ ಕೈಯಲ್ಲಿ ಕೊಡಬೇಕು. ಆಮೇಲೆ ಆಕೆಯನ್ನು ತನ್ನ ಮನೆಯಿಂದ ಹೊರಗೆ ಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಅಸಂತೃಪ್ತನಾದರೆ, ವಿವಾಹ ವಿಚ್ಛೇದನ ಪತ್ರವನ್ನು ಬರೆದು, ಅವಳ ಕೈಯಲ್ಲಿ ಕೊಟ್ಟು, ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:1
19 ತಿಳಿವುಗಳ ಹೋಲಿಕೆ  

ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ಬೆಳ್ಳಿನಾಣ್ಯ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗ ಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.


ಆ ಊರಿನ ಹಿರಿಯರು ಅವನನ್ನು ಹಿಡಿಸಿ, ನೂರು ಬೆಳ್ಳಿ ನಾಣ್ಯದ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು; ಮತ್ತು ಅವನು ಆ ಮಹಿಳೆಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರ ಇರುವುದಿಲ್ಲ.


“ಒಬ್ಬನು ತಾನು ಮದುವೆಮಾಡಿಕೊಂಡ ಹೆಂಡತಿಯನ್ನು ದ್ವೇಷಿಸಿ


ಯಜಮಾನ ಇನ್ನೊಬ್ಬಳನ್ನು ಸೇರಿಸಿಕೊಂಡರೂ ಮೊದಲನೆಯವಳಿಗೆ ಅನ್ನ, ಬಟ್ಟೆ, ದಾಂಪತ್ಯದ ಹಕ್ಕುಗಳನ್ನು ಕಡಿಮೆ ಮಾಡಕೂಡದು.


ಹೆಂಡತಿಯನ್ನು ಬಿಟ್ಟುಬಿಟ್ಟು ಬೇರೊಬ್ಬಳನ್ನು ಮದುವೆಯಾಗುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ. ಅಂತೆಯೇ, ಗಂಡಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ.”


ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.


ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆ ಹೇಳುತ್ತಾರೆ: “ವಿವಾಹ ವಿಚ್ಛೇದನವನ್ನು ದ್ವೇಷಿಸುತ್ತೇನೆ. ತನ್ನ ಮಡದಿಗೆ ನಂಬಿಕೆದ್ರೋಹವನ್ನೆಸಗುವವನನ್ನು ಹಾಗು ದೌರ್ಜನ್ಯ ತೋರುವವನನ್ನು ಹಗೆಮಾಡುತ್ತೇನೆ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಆದಕಾರಣ ಮನಃಪೂರ್ವಕವಾಗಿ ಎಚ್ಚರಿಕೆಯಿಂದಿರಿ ನಿಮ್ಮ ಮಡದಿಗೆ ದ್ರೋಹವೆಸಗದಿರಿ.


“ಒಬ್ಬನಿಗೆ ಇಬ್ಬರು ಹೆಂಡತಿಯರಿದ್ದು ಅವರಲ್ಲಿ ಒಬ್ಬಳನ್ನು ಪ್ರೀತಿಸಿ ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೂ,


ಒಬ್ಬನ ಹೆಂಡತಿ ತಪ್ಪುದಾರಿ ಹಿಡಿದು, ತನ್ನ ಗಂಡನಿಗೆ ಅಪ್ರಾಮಾಣಿಕಳಾಗಿ ನಡೆದು ಸಿಕ್ಕಿಕೊಳ್ಳದೆ, ಸಾಕ್ಷಿಯಿಲ್ಲದೆ


ಆದರೆ ಆಕೆ ದುಷ್ಟಳಾಗಿರದೆ, ನಿರಪರಾಧಿಯಾಗಿದ್ದ ಪಕ್ಷಕ್ಕೆ ಅವಳಿಗೆ ಯಾವ ಹಾನಿಯೂ ಸಂಭವಿಸದೆ ಗರ್ಭವತಿಯಾಗುವಳು.


ಅವಳು ಮತ್ತೊಬ್ಬನನ್ನು ಮದುವೆ ಆಗಿ ಅವನಿಂದಲೂ ತಿರಸ್ಕರಿಸಲ್ಪಟ್ಟು ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಈ ಎರಡನೆಯ ಗಂಡನು ಸತ್ತುಹೋದರೆ,


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು