Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:13 - ಕನ್ನಡ ಸತ್ಯವೇದವು C.L. Bible (BSI)

13 ಹೊತ್ತುಮುಳುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು; ಅದನ್ನು ಇಟ್ಟುಕೊಂಡು ನೀವು ರಾತ್ರಿ ಮಗಲಬಾರದು; ಅವನು ಅದನ್ನು ಹೊದ್ದುಕೊಂಡು ಮಲಗಿಕೊಳ್ಳಬೇಕಲ್ಲವೆ? ಅದಲ್ಲದೆ, ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಸರ್ವೇಶ್ವರ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪ್ರತೀ ಸಾಯಂಕಾಲ ಆ ಕಂಬಳಿಯನ್ನು ಹಿಂದಕ್ಕೆ ಕೊಡಬೇಕು. ಆಗ ಅವನಿಗೆ ರಾತ್ರಿ ಹೊದ್ದುಕೊಳ್ಳಲು ಇರುವುದು. ಅವನು ನಿನ್ನನ್ನು ಆಶೀರ್ವದಿಸುವನು. ಅಲ್ಲದೆ ದೇವರಾದ ಯೆಹೋವನು ನಿಮ್ಮ ಆ ಒಳ್ಳೆಯ ಕಾರ್ಯವನ್ನು ಗಣನೆಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿನ್ನ ನೆರೆಯವನು ಅದರಲ್ಲಿ ಮಲಗಲು ಸಾಯಂಕಾಲದ ಹೊತ್ತಿಗೆ ಅವನು ಹೊದ್ದುಕೊಳ್ಳುವ ವಸ್ತ್ರವನ್ನು ಹಿಂತಿರುಗಿಸು. ಆಗ ಅವನು ನಿನ್ನನ್ನು ಆಶೀರ್ವದಿಸುವನು. ನೀನು ಮಾಡಿದ್ದು ನಿನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ನೀತಿಯ ಕಾರ್ಯವೆಂದು ಪರಿಗಣಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:13
24 ತಿಳಿವುಗಳ ಹೋಲಿಕೆ  

ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ನಮ್ಮ ದೇವರಾದ ಸರ್ವೇಶ್ವರ ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಅವರ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿತರಾಗುವೆವು,’ ಎಂದು ನೀವು ಉತ್ತರಕೊಡಬೇಕು.


ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ಪ್ರತಿಯೊಂದು ಪ್ರಾರ್ಥನಾಲಯದಲ್ಲಿಯೂ ಮಲಗುತ್ತಾರೆ. ಬಡವರಿಂದ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆಯೇ ಬಿದ್ದಿರುತ್ತಾರೆ. ವಿಧಿ ಇಲ್ಲದೆ ದಂಡತೆರಬೇಕಾದವರಿಂದ ಹೆಂಡವನ್ನು ತಂದು ದೇವರ ಮಂದಿರದಲ್ಲೇ ಕುಡಿಯುತ್ತಾರೆ.


ಅಂದರೆ, ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರವಾದರೆ ಅವನು ಸಾಯನು, ಬಾಳೇ ಬಾಳುವನು.


ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು.


ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ


“ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು