Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 25:5 - ಕನ್ನಡ ಸತ್ಯವೇದವು C.L. Bible (BSI)

5 “ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ ಅವನ ಹೆಂಡತಿ ಬೇರೆ ಪುರುಷನನ್ನು ಮದುವೆ ಆಗಬಾರದು. ಅವಳ ಮೈದುನ ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನ ಧರ್ಮವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ, ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನನು ಅವಳನ್ನು ಹೆಂಡತಿಯನ್ನಾಗಿ ತೆಗೆದುಕೊಂಡು ಮೈದುನಧರ್ಮವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಣ್ಣ ತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ ಅವನ ಹೆಂಡತಿ ಬೇರೆ ಪುರುಷನನ್ನು ಮದುವೆಯಾಗಬಾರದು. ಅವಳ ಮೈದುನ ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನ ಧರ್ಮವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತುಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಹೋದರರು ಕೂಡಿ ವಾಸಮಾಡುವಾಗ, ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಆ ಸತ್ತವನ ಹೆಂಡತಿ ಮನೆಬಿಟ್ಟು ಅನ್ಯನನ್ನು ಮದುವೆಯಾಗಬಾರದು. ಗಂಡನ ಸಹೋದರನು ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನನ ಕರ್ತವ್ಯವನ್ನು ಪೂರೈಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 25:5
11 ತಿಳಿವುಗಳ ಹೋಲಿಕೆ  

ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ.


“ಬೋಧಕರೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೆ?


“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ?


ಆಗ ಬೋವಜನು, “ನೀನು ಆ ಹೊಲವನ್ನು ಕೊಂಡುಕೊಳ್ಳುವುದಾದರೆ, ಅವಳ ಸೊಸೆಯಾದ ಮೋವಾಬದ ರೂತಳನ್ನು ನೀನು ಮದುವೆಯಾಗಬೇಕು. ಆಗ ಆ ಹೊಲದ ಖಾತೆ ಗತಿಸಿದ ಮಗನ ಹೆಸರಿನಲ್ಲೇ ಉಳಿಯುತ್ತದೆ,” ಎಂದು ತಿಳಿಸಿದನು.


ಇಂತಿರಲು, ಅವನ ಹಿರಿಯ ಮಗಳು ತನ್ನ ತಂಗಿಗೆ ಹೀಗೆಂದಳು. “ನಮ್ಮ ತಂದೆ ಮುದುಕ; ಲೋಕ ಪದ್ಧತಿಯ ಪ್ರಕಾರ ನಮ್ಮನ್ನು ಮದುವೆ ಮಾಡಿಕೊಳ್ಳುವ ಗಂಡುಗಳು ಇಲ್ಲೆಲ್ಲಿಯೂ ಇಲ್ಲ.


ಆಗ ನವೊಮಿ, “ಮಕ್ಕಳೇ, ನೀವು ಹಿಂತಿರುಗುವುದು ಒಳ್ಳೆಯದು. ನನ್ನ ಸಂಗಡ ಏಕೆ ಬರಬೇಕೆಂದಿರುವಿರಿ? ನೀವು ಪುನಃ ಮದುವೆಯಾಗುವುದಕ್ಕೆ ನನಗೆ ಬೇರೆ ಮಕ್ಕಳಿರುವರೇ?


ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು.


ಈ ರಾತ್ರಿ ಇಲ್ಲೇ ಇರು. ಅವನು ನಿನ್ನನ್ನು ಸಲಹುವ ಜವಾಬ್ದಾರಿ ವಹಿಸಿಕೊಳ್ಳುವನೋ ಇಲ್ಲವೋ ಎಂಬುದನ್ನು ನಾಳೆ ವಿಚಾರಿಸಿಕೊಳ್ಳೋಣ. ಅವನು ಅದನ್ನು ವಹಿಸಿಕೊಳ್ಳುವುದಾದರೆ ಒಳ್ಳೆಯದು. ಇಲ್ಲವಾದರೆ ನಾನೇ ಆ ಕರ್ತವ್ಯವನ್ನು ವಹಿಸಿಕೊಳ್ಳುತ್ತೇನೆ ಎಂದು ಜೀವಸ್ವರೂಪರಾದ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಇನ್ನು ನಿಶ್ಚಿಂತಳಾಗಿ ಮಲಗು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು