Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:5
28 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.


ಅವರಲ್ಲದೆ ಈಜಿಪ್ಟ್ ದೇಶದಲ್ಲಿ ಜೋಸೆಫನಿಗೆ ಹುಟ್ಟಿದವರು ಇಬ್ಬರು. ಈಜಿಪ್ಟ್ ದೇಶಕ್ಕೆ ಹೋದ ಯಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ.


ಯಕೋಬನೂ ಆರಾಮ್ಯನಾದ ಆ ಲಾಬಾನನಿಗೆ ತಾನು ಹೋಗುತ್ತಾ ಇದ್ದೇನೆಂದು ತಿಳಿಸದೆ ವಂಚಿಸಿ ಓಡಿಹೋದನು.


ಬರಗಾಲ ತೀರುವುದಕ್ಕೆ ಇನ್ನೂ ಐದು ವರ್ಷ ಕಳೆಯಬೇಕಾಗಿದೆ. ಆದುದರಿಂದ ನಿಮಗೂ ನಿಮ್ಮ ಕುಟುಂಬಕ್ಕೂ ನಿಮಗಿರುವ ಸಮಸ್ತಕ್ಕೂ ಬಡತನ ತಟ್ಟದಂತೆ ನಾನು ನಿಮ್ಮನ್ನು ಪೋಷಿಸುತ್ತೇನೆ’, ಎಂದು ಹೇಳಿರುವುದಾಗಿ ತಿಳಿಸಿರಿ.


ನಿಮ್ಮ ಜನ ಧರೆಯಲ್ಲಿ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಅಭಿವೃದ್ಧಿಯಾಗುವಂತೆಯೂ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಕಳಿಸಿದರು.


ಅದೂ ಅಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳಿಸಿದ ಹಣವನ್ನು ತೆಗೆದುಕೊಂಡು ಹೋಗಿ; ಬಹುಶಃ ಅವರಿಗೆ ತಿಳಿಯದೆ ಅದು ನಿಮ್ಮ ಕೈಗೆ ಬಂದಿರಬಹುದು.


ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.


ಇವರ ಒಟ್ಟು ಸಂಖ್ಯೆ ಎಪ್ಪತ್ತೈದು. ಯಕೋಬನು ಈಜಿಪ್ಟಿಗೆ ಹೋದನು. ಅವನೂ ನಮ್ಮ ಪಿತಾಮಹರೂ ಅಲ್ಲೇ ನಿಧನರಾದರು.


ಯಕೋಬನು ಮೆಸಪಟೋಮಿಯಕ್ಕೆ ಓಡಿಹೋಗಬೇಕಾಯಿತು. ಅಲ್ಲಿ ಮದುವೆಗೋಸ್ಕರ ಜೀತಮಾಡಿದನು; ವಧುವಿಗೋಸ್ಕರ ಕುರಿ ಕಾಯ್ದನು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾದಿಂದ ಬರಮಾಡಿಸಿಕೊಂಡು ಮದುವೆಯಾದನು.


ನನ್ನ ಸ್ವಂತ ನಾಡಿಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಅವನಿಗೆ ಹೆಣ್ಣು ತರಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಇಹಪರಲೋಕಗಳ ಸರ್ವೇಶ್ವರನಾದ ದೇವರ ಮೇಲೆ ಪ್ರಮಾಣ ಮಾಡಬೇಕು,” ಎಂದು ಹೇಳಿದನು.


“ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು.


ಈಜಿಪ್ಟರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚಿ ಹರಡಿಕೊಳ್ಳುತ್ತಿದ್ದರು.


ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ಯಕೋಬನ ಸಂತತಿಯವರೆಲ್ಲರು ಎಪ್ಪತ್ತು ಮಂದಿ. ಜೋಸೆಫನು ಈಗಾಗಲೇ ಈಜಿಪ್ಟಿನಲ್ಲಿ ಇದ್ದನು.


ಇಸ್ರಯೇಲರು ಈಜಿಪ್ಟ್ ದೇಶಕ್ಕೆ ಸೇರಿದ ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡಿದರು. ಅಲ್ಲಿ ಅವರು ಆಸ್ತಿಪಾಸ್ತಿಯನ್ನು ಸಂಪಾದಿಸಿಕೊಂಡು ಬಹು ಸಂತಾನವುಳ್ಳವರಾಗಿ ಅಭಿವೃದ್ಧಿಯಾದರು.


ಹಗಲಿನ ಬೇಗೆಯಿಂದಲೂ ಇರುಳಿನ ಚಳಿಯಿಂದಲೂ ಕರಗಿಹೋಗಿದ್ದೆ; ಕಣ್ಣುಗಳಿಗೆ ನಿದ್ರೆ ದೂರವಾಗಿತ್ತು.


ಯಕೋಬನು ಮೆಸಪೊಟೇಮಿಯಗೆ ಹೊರಟು, ಅರಾಮ್ಯನಾದ ಬೆತೂವೇಲನ ಮಗನೂ ಮತ್ತು ಯಕೋಬ ಹಾಗು ಏಸಾವನಿಗೆ ತಾಯಿಯಾದ ರೆಬೆಕ್ಕಳಿಗೆ ಅಣ್ಣನೂ ಆಗಿದ್ದ ಲಾಬಾನನ ಬಳಿಗೆ ಹೋದನು.


ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸಂಖ್ಯೆಯಲ್ಲಿ ಹೆಚ್ಚಿಸಿದ್ದಾರೆ; ನೀವು ಆಕಾಶದ ನಕ್ಷತ್ರಗಳಷ್ಟಾಗಿದ್ದೀರಿ;


“ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮುಂದೆ ಇಡುವನು.


ದೇವರು ಪ್ರವಾದಿಯನ್ನು ಕಳುಹಿಸಿ, ಇಸ್ರಯೇಲನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಪ್ರವಾದಿಯ ಮುಖಾಂತರ ಇಸ್ರಯೇಲಿಗೆ ರಕ್ಷಣೆ ದೊರಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು