Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:6 - ಕನ್ನಡ ಸತ್ಯವೇದವು C.L. Bible (BSI)

6 ಈಜಿಪ್ಟರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ ಬಾಧಿಸಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈಜಿಪ್ಟಿನವರು ನಮ್ಮನ್ನು ಕಠಿಣವಾಗಿ ನೋಡಿಕೊಳ್ಳುತ್ತಿದ್ದರು. ನಮ್ಮನ್ನು ಗುಲಾಮರಾಗಿ ಉಪಯೋಗಿಸಿದರು. ನಮ್ಮನ್ನು ಹಿಂಸಿಸಿ, ಕಷ್ಟಕರವಾದ ಕೆಲಸವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಈಜಿಪ್ಟಿನವರು ನಮ್ಮನ್ನು ಕ್ರೂರವಾಗಿ ನಡೆಸಿ, ನಮ್ಮ ಮೇಲೆ ದಬ್ಬಾಳಿಕೆ ಮಾಡಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:6
11 ತಿಳಿವುಗಳ ಹೋಲಿಕೆ  

ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ನಾನು ಫರೋಹನ ಬಳಿಗೆ ಹೋಗಿ ನಿಮ್ಮ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀವಾದರೋ ಅವರನ್ನು ಬಿಡುಗಡೆ ಮಾಡಲು ಏನನ್ನೂ ಮಾಡಿಲ್ಲ,” ಎಂದು ಮೊರೆಯಿಟ್ಟನು.


ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಕಟ್ಟಪ್ಪಣೆ ಆದುದರಿಂದ ಇಸ್ರಯೇಲ್ ಮೇಸ್ತ್ರಿಗಳು ತಾವು ಎಂಥ ಬಿಕ್ಕಟ್ಟಿಗೆ ಸಿಕ್ಕಿಕೊಂಡೆವೆಂದು ಗ್ರಹಿಸಿಕೊಂಡರು.


ನೀವು ಅವರಿಂದ ಇನ್ನೂ ಕಷ್ಟಕರವಾದ ಕೆಲಸ ಮಾಡಿಸಬೇಕು. ಕೆಲಸ ಹೆಚ್ಚಾದರೆ ಸುಳ್ಳುಪೊಳ್ಳು ಮಾತುಗಳಿಗೆ ಕಿವಿಗೊಡಲು ಆಸ್ಪದಯಿರುವುದಿಲ್ಲ,” ಎಂದು ಆಜ್ಞಾಪಿಸಿದನು.


ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


“ನೀವು ಹಿಬ್ರಿಯ ಮಹಿಳೆಯರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗು ಗಂಡಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು,” ಎಂದು ಹೇಳಿದ್ದನು.


ಅನಂತರ ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ.


ಆಗ ನಾವು ನಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟೆವು; ಅವರು ಆಲಿಸಿ ನಮ್ಮ ದುರವಸ್ಥೆಯನ್ನೂ ಕಷ್ಟ ಉಪದ್ರವಗಳನ್ನೂ ನೋಡಿ,


ನಮ್ಮ ಪೂರ್ವಜರು ಈಜಿಪ್ಟ್ ದೇಶಕ್ಕೆ ಹೋದದ್ದು, ಅಲ್ಲಿ ನಾವು ಬಹು ದಿವಸ ವಾಸವಾಗಿದ್ದದ್ದು, ಈಜಿಪ್ಟಿನವರು ನಮ್ಮನ್ನೂ ನಮ್ಮ ಪೂರ್ವಜರನ್ನೂ ಹಿಂಸಿಸಿದ್ದು, ಇವೆಲ್ಲಾ ತಿಳಿದ ವಿಷಯಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು