Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:2 - ಕನ್ನಡ ಸತ್ಯವೇದವು C.L. Bible (BSI)

2-3 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ ಅಂದರೆ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ತಾವು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ, ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಬೇಕು. ಅವುಗಳಿಗೆ ಗಿಲಾವು ಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಯೊರ್ದನನ್ನು ದಾಟಿ ಪ್ರವೇಶಿಸುವಾಗ, ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:2
16 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಜನರು ಅದರ ಮೇಲೆ ಸರ್ವೇಶ್ವರನಿಗೆ ದಹನ ಹೋಮಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು.


ಜನರೆಲ್ಲರು ಜೋರ್ಡನಿನ ಆಚೆ ಕಡೆಗೆ ಸೇರಿದ ಮೇಲೆ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ ಹೀಗೆಂದರು:


“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ಜನರಿಗೆ, ‘ನೀವು ಇನ್ನು ಮೂರು ದಿನಗಳಲ್ಲಿ ಈ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತ ಸೊತ್ತಾಗಿ ಕೊಡುವ ನಾಡನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರ ಪದಾರ್ಥಗಳನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ,” ಎಂದನು.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲು ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟಬೇಕಾಗಿದೆ. ನೀವು ಆ ನಾಡನ್ನು ವಶಪಡಿಸಿಕೊಂಡು, ಅದರಲ್ಲಿ ವಾಸಮಾಡುವಾಗ,


“ಇಸ್ರಯೇಲರೇ ಕೇಳಿ : ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


ಮೋಶೆ ಇಸ್ರಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.


ನೀವು ಜೋರ್ಡನ್ ನದಿಯನ್ನು ದಾಟಿದನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು


ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರಿಗೆ ಆಜ್ಞಾಪಿಸಿದ್ದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಯಾವ ಕಬ್ಬಿಣವೂ ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು.


ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು.


ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಶಾಶ್ವತ ಶಾಸನವಾಗಿಸಿದ್ದರೆ ಎಷ್ಟೋ ಒಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು