Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಆಕಾಶದಲ್ಲಿರುವ ತಮ್ಮ ಜಲನಿಧಿಯನ್ನು ತೆರೆದು ನಿಮ್ಮ ನಾಡಿನ ಮೇಲೆ, ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲ ವ್ಯವಸಾಯವನ್ನೂ ಫಲಭರಿತವಾಗಿ ಮಾಡುವರು. “ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ ನಿಮ್ಮ ಎಲ್ಲಾ ವ್ಯವಸಾಯವನ್ನೂ ಸಫಲಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:12
15 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ; ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.


ಕೊಡುವಾಗ ನೀವು ಬೇಸರಗೊಳ್ಳದೆ ಉದಾರ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲೂ ಪ್ರಯತ್ನಗಳಲ್ಲೂ ನಿಮ್ಮನ್ನು ಅಭಿವೃದ್ಧಿಪಡಿಸುವರು.


ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು.


ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.


ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.


ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?


ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಕೈಗೂಡಿಸಿ ಅಭಿವೃದ್ಧಿಪಡಿಸುವರು.


ನಿಮ್ಮ ನಾಡಿನ ಮೇಲೆ ಆಕಾಶದಿಂದ ಮಳೆಗೆ ಬದಲಾಗಿ ಧೂಳಿಯನ್ನೂ ಉಸುಬನ್ನೂ ಸರ್ವೇಶ್ವರ ಸುರಿಸುವರು; ಇದರಿಂದ ನೀವು ನಾಶವಾಗಿ ಹೋಗುವಿರಿ.


ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು