Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:21 - ಕನ್ನಡ ಸತ್ಯವೇದವು C.L. Bible (BSI)

21 ವ್ಯಾಧಿ ನಿಮಗೆ ಹತ್ತಿಕೊಂಡೇ ಇರುವಂತೆ ಮಾಡಿ ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಸರ್ವೇಶ್ವರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ, ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ವ್ಯಾಧಿಯು ನಿಮಗೆ ಹತ್ತಿಕೊಂಡೇ ಇರುವಂತೆ ಯೆಹೋವನು ಮಾಡಿ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಸ್ವಾಸ್ತ್ಯವಾಗಿ ಹೊಂದಲಿರುವ ದೇಶದಿಂದ ನೀವು ನಾಶವಾಗುವವರೆಗೆ, ನಿಮ್ಮ ದೇವರಾದ ಯೆಹೋವನು ನಿಮಗೆ ಭಯಂಕರವಾದ ರೋಗಗಳನ್ನು ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವವರೆಗೆ ಯೆಹೋವ ದೇವರು ನಿಮಗೆ ವ್ಯಾಧಿಯು ಅಂಟಿಕೊಳ್ಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:21
14 ತಿಳಿವುಗಳ ಹೋಲಿಕೆ  

ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”


‘ನಾವೆಲ್ಲಿಗೆ ಹೋಗಬೇಕು?’ ಎಂದು ಕೇಳಿಯಾರು. ಆಗ ನೀನು ಅವರಿಗೆ : ‘ಇದು ಸರ್ವೇಶ್ವರನ ಸಂದೇಶ: ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಸಾಯುವರು’ ಎಂದು ಹೇಳು.


ಆಗಲಿ, ನಾನು ಇವರಿಗೆ ದೊಡ್ಡ ರೋಗವನ್ನು ಬರಮಾಡಿ ಇವರನ್ನು ನಿರ್ಮೂಲ ಮಾಡಿಬಿಡುತ್ತೇನೆ; ಇವರಿಗಿಂತ ದೊಡ್ಡದೂ ಬಲಿಷ್ಠವೂ ಆದ ಜನಾಂಗವೊಂದನ್ನು ನಿನ್ನಿಂದಲೇ ಹುಟ್ಟಿಸುವೆನು,” ಎಂದು ಹೇಳಿದರು.


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.


ಮೋಶೆ ಮತ್ತು ಆರೋನರು, “ಹಿಬ್ರಿಯರ ದೇವರು ನಮಗೆ ದರ್ಶನವಿತ್ತರು. ಅಪ್ಪಣೆ ಆದರೆ ನಾವು ಮರುಭೂಮಿಯಲ್ಲಿ ಮೂರು ದಿವಸದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸಿ ಬರುತ್ತೇವೆ. ಹಾಗೆ ಮಾಡದೆಹೋದರೆ ಅವರು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರ ಮಾಡುವರು,” ಎಂದರು.


ಆಗ ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಸುಗಂಧತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಊಟಕ್ಕೆ ಕುಳಿತಿದ್ದ ಯೇಸುವಿನ ತಲೆಯ ಮೇಲೆ ಆ ತೈಲವನ್ನು ಸುರಿದಳು.


“ನಾಡಿಗೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೇಹುಳು, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆ ಉಂಟಾದರೆ,


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು