Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:28 - ಕನ್ನಡ ಸತ್ಯವೇದವು C.L. Bible (BSI)

28 ಹುಚ್ಚುತನ, ಕುರುಡುತನ, ಬೆಪ್ಪುತನ ಇವುಗಳಿಂದ ಸರ್ವೇಶ್ವರ ನಿಮ್ಮನ್ನು ಪೀಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಚಿತ್ತಭ್ರಮಣೆ, ಕುರುಡತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ನಿಮ್ಮನ್ನು ದಿಗ್ಬ್ರಾಂತರನ್ನಾಗಿ ಮಾಡುವನು; ನಿಮ್ಮನ್ನು ಕುರುಡರನ್ನಾಗಿ ಮಾಡಿ ಗಲಿಬಿಲಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೆಹೋವ ದೇವರು ನಿಮ್ಮನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಕಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:28
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಹೀಗೆಂದರು - “ಆ ದಿನದಂದು ಅರಸರು ಎದೆಗುಂದುವರು, ಅಧಿಪತಿಗಳ ಹೃದಯ ಕುಗ್ಗುವುದು. ಯಾಜಕರು ಸ್ತಬ್ಧರಾಗುವರು; ಪ್ರವಾದಿಗಳು ನಿಬ್ಬೆರಗಾಗುವರು.”


ಸರ್ವೇಶ್ವರನ ಆತ್ಮ ಸೌಲನನ್ನು ಬಿಟ್ಟುಹೋಯಿತು. ಅವರಿಂದ ಬಂದ ದುರಾತ್ಮವೊಂದು ಅವನನ್ನು ಪೀಡಿಸುತ್ತಿತ್ತು.


‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.


ಅವರಲ್ಲಿ ಪ್ರತಿಯೊಬ್ಬರು ಅನ್ನನೀರಿನ ಕೊರತೆಯಿಂದ ಕುಗ್ಗಿಹೋಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.”


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.


ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು.


“ಈಜಿಪ್ಟರನ್ನು ಬಾಧಿಸಿದಂತೆ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಸರ್ವೇಶ್ವರ ನಿಮ್ಮನ್ನು ಬಾಧಿಸುವರು.


ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಿಹರು ಆ ಯಾಜಕರು ಮತ್ತು ಪ್ರವಾದಿಗಳು. ಅವರ ಬಟ್ಟೆಯನ್ನೂ ಯಾರೂ ಮುಟ್ಟರು ಏಕೆಂದರೆ ರಕ್ತದಿಂದ ಅವರು ಕಳಂಕಿತರಾಗಿಹರು.


“ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದ ಹಾಗು ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು