Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:29 - ಕನ್ನಡ ಸತ್ಯವೇದವು C.L. Bible (BSI)

29 ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಹಗಲಿನಲ್ಲೂ ಕುರುಡರಂತೆ ನೀವು ತಡವರಿಸುವಿರಿ. ನೀವು ಮಾಡುವ ಕಾರ್ಯವೆಲ್ಲವೂ ನಿಷ್ಫಲವಾಗುವವು. ಜನರು ನಿಮ್ಮನ್ನು ಬಾಧಿಸಿ ನಿಮ್ಮಲ್ಲಿರುವದನ್ನೆಲ್ಲಾ ದೋಚಿಕೊಂಡು ಹೋಗುವರು. ನಿಮ್ಮನ್ನು ರಕ್ಷಿಸಲು ಯಾರೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಕಣ್ಣು ಕಾಣದವನು ಕತ್ತಲಲ್ಲಿ ತಡವಾಡುವಂತೆ ಮಧ್ಯಾಹ್ನದಲ್ಲಿ ತಡವಾಡುತ್ತಾ ಇರುವಿರಿ, ನಿಮ್ಮ ಮಾರ್ಗಗಳಲ್ಲಿ ಸಫಲವಾಗುವುದಿಲ್ಲ. ನೀವು ಯಾವಾಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ, ಸುಲಿಗೆಯನ್ನೂ ಅನುಭವಿಸುವವರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:29
26 ತಿಳಿವುಗಳ ಹೋಲಿಕೆ  

ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ.


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.


ಇವರು ಆ ವರ್ಷದಿಂದ ಹದಿನೆಂಟು ವರ್ಷಗಳವರೆಗೆ ಜೋರ್ಡನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಯೇಲರನ್ನು ಬಹಳವಾಗಿ ಪೀಡಿಸುತ್ತಾ ಅವರ ಮೇಲೆ ದಬ್ಬಾಳಿಕೆ ನಡೆಸಿದರು. ಈ ನಾಡು ಮೊದಲು ಅಮೋರಿಯರದಾಗಿತ್ತು.


ಹದಿನೆಂಟು ವರ್ಷಕಾಲ ಇಸ್ರಯೇಲರು ಅವನಿಗೆ ಗುಲಾಮರಾಗಿದ್ದರು.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ನೀನು ಅವರನ್ನು ಕರೆದುಕೊಂಡು ಹೋಗಿ ಅವರ ಜೊತೆಯಲ್ಲಿ ನೀನೂ ಶುದ್ಧಾಚಾರವಿಧಿಯನ್ನು ಮಾಡಿಸಿಕೊ. ಅವರ ಖರ್ಚುವೆಚ್ಚವನ್ನೆಲ್ಲಾ ನೀನೇ ವಹಿಸಿಕೋ. ಅವರು ಮುಂಡನ ಮಾಡಿಸಿಕೊಳ್ಳಲಿ. ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿಸಿಕೊಂಡಿರುವ ವಿಷಯ ನಿಜವಲ್ಲವೆಂದೂ ನೀನು ಕೂಡ ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯುತ್ತಿರುವೆ ಎಂದೂ ಅವರೆಲ್ಲರಿಗೂ ಮನವರಿಕೆಯಾಗುವುದು.


ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”


ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


ದಾಸರುಗಳೇ ನಮಗೆ ದಣಿಗಳಾದರು ಅವರಿಂದ ನಮ್ಮನ್ನು ಬಿಡಿಸುವವರಾರೂ ಇಲ್ಲವಾದರು!


ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”


ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”


ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು.


ಆ ಬಳಿಕ ಸರ್ವೇಶ್ವರ ಮೋಶೆಗೆ, “ಆಕಾಶದತ್ತ ನಿನ್ನ ಕೈಚಾಚು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ಕತ್ತಲೆಯುಂಟಾಗುವುದು. ಜನರು ತಡವರಿಸಿ ನಡೆಯಬೇಕಾಗುವಷ್ಟು ಕತ್ತಲೆ ಉಂಟಾಗುವುದು.


ಹುಚ್ಚುತನ, ಕುರುಡುತನ, ಬೆಪ್ಪುತನ ಇವುಗಳಿಂದ ಸರ್ವೇಶ್ವರ ನಿಮ್ಮನ್ನು ಪೀಡಿಸುವರು.


ಸಿಯೋನಿನಿಂದ ಕೇಳಿಬಂದ ಪ್ರಲಾಪನೆ : “ಅಯ್ಯೋ ಹಾಳಾದೆವು, ನಮ್ಮ ಮಾನಮರ್ಯಾದೆ ಕಳೆದುಹೋಯಿತು ! ನಾವು ನಮ್ಮ ನಾಡನ್ನೇ ಬಿಟ್ಟು ತೊಲಗಬೇಕಾಗಿ ಬಂದಿತು. (ಶತ್ರುಗಳಿಂದ) ನಮ್ಮ ಮನೆಮಠಗಳು ನೆಲಸಮವಾದವು.”


ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಿಹರು ಆ ಯಾಜಕರು ಮತ್ತು ಪ್ರವಾದಿಗಳು. ಅವರ ಬಟ್ಟೆಯನ್ನೂ ಯಾರೂ ಮುಟ್ಟರು ಏಕೆಂದರೆ ರಕ್ತದಿಂದ ಅವರು ಕಳಂಕಿತರಾಗಿಹರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು