Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:37 - ಕನ್ನಡ ಸತ್ಯವೇದವು C.L. Bible (BSI)

37 ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:37
13 ತಿಳಿವುಗಳ ಹೋಲಿಕೆ  

“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ಹುಚ್ಚುತನ, ಕುರುಡುತನ, ಬೆಪ್ಪುತನ ಇವುಗಳಿಂದ ಸರ್ವೇಶ್ವರ ನಿಮ್ಮನ್ನು ಪೀಡಿಸುವರು.


ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಕಸವನ್ನಾಗಿಯೂ ಹೊಲಸನ್ನಾಗಿಯೂ ನಮ್ಮನ್ನು ಎಸೆದುಬಿಟ್ಟೆ ರಾಷ್ಟ್ರಗಳ ನಡುವೆ.


“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು