Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:45 - ಕನ್ನಡ ಸತ್ಯವೇದವು C.L. Bible (BSI)

45 “ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ ಅವರು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ, ನಿಮ್ಮನ್ನು ಹಿಂದಟ್ಟಿ ಹಿಡಿದು, ಕಡೆಗೆ ನಾಶಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ ಆತನು ನೇವಿುಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ನಿಮ್ಮ ದೇವರಾದ ಯೆಹೋವನು ಹೇಳಿದ ಸಂಗತಿಗಳಿಗೆ ನೀವು ಕಿವಿಗೊಡದೆ ಹೋದದ್ದರಿಂದ, ಆತನು ಕೊಟ್ಟ ಆಜ್ಞೆಗಳಿಗೂ ನಿಯಮಗಳಿಗೂ ನೀವು ವಿಧೇಯರಾಗದಿದ್ದ ಕಾರಣ ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬರುತ್ತವೆ. ನೀವು ನಾಶವಾಗುವವರೆಗೂ ಅವು ನಿಮ್ಮನ್ನು ಅಟ್ಟಿಸಿಕೊಂಡು ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳದೆ ಅವರು ನಿಮಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ನಿಯಮಗಳನ್ನೂ ಕೈಗೊಳ್ಳದೆ ಇದ್ದುದರಿಂದ, ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬಂದು, ನಿಮ್ಮನ್ನು ನಾಶಮಾಡುವವರೆಗೂ ನಿಮ್ಮನ್ನು ಹಿಂದಟ್ಟುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:45
18 ತಿಳಿವುಗಳ ಹೋಲಿಕೆ  

“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು:


ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.


ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II


ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.


ನಿಮ್ಮ ಧಾನ್ಯಕ್ಕೂ ಅದರಿಂದ ಮಾಡುವ ಭೋಜನಕ್ಕೂ ಶುಭ ಉಂಟಾಗುವುದು.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.


“ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆಯುವಷ್ಟು ಕಾಲ ಆ ನಾಡಿನಲ್ಲಿದ್ದು, ಯಾವುದಾದರೊಂದು ವಿಗ್ರಹವನ್ನು ಮಾಡಿಕೊಂಡು ದ್ರೋಹಿಗಳಾಗಿ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರನ್ನು ಸಿಟ್ಟುಗೊಳಿಸಿದ್ದೇ ಆದರೆ


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು