Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:46 - ಕನ್ನಡ ಸತ್ಯವೇದವು C.L. Bible (BSI)

46 ಇವು ನಿಮಗೂ ನಿಮ್ಮ ಸಂತತಿಯವರಿಗೂ ನಿರಂತರವಾಗಿ ಪ್ರಾಪ್ತವಾಗುವುವು; ಸರ್ವರಿಗೆ ಬೆರಗನ್ನೂ ಎಚ್ಚರಿಕೆಯನ್ನೂ ಉಂಟುಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಇವು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ ಎಲ್ಲರಿಗೂ ಎಚ್ಚರಿಕೆಯನ್ನೂ ಮತ್ತು ಬೆರಗನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಇವು ನಿಮಗೂ ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ [ಎಲ್ಲರಿಗೂ] ಎಚ್ಚರಿಕೆಯನ್ನೂ ಬೆರಗನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನೀವೂ ನಿಮ್ಮ ಸಂತತಿಯವರೂ ದೇವರ ಶಾಶ್ವತವಾದ ತೀರ್ಪನ್ನು ಹೊಂದಿದ್ದೀರೆಂಬುದಕ್ಕೆ ಬೇರೆಯವರಿಗೆ ಈ ಶಾಪಗಳೇ ಸೂಚನೆಯಾಗಿಯೂ ರುಜುವಾತಾಗಿಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವು ನಿಮ್ಮ ಮೇಲೂ ನಿಮ್ಮ ಸಂತತಿಯ ಮೇಲೂ ಯಾವಾಗಲೂ ಗುರುತೂ ಅದ್ಭುತವೂ ಆಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:46
13 ತಿಳಿವುಗಳ ಹೋಲಿಕೆ  

ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.


ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.


ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.


ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.


ಇವರನ್ನು ಹಾಗು ಕೋರಹನನ್ನು ಭೂಮಿ ಬಾಯ್ದೆರೆದು ನುಂಗಿಬಿಟ್ಟಿತು. ಆ ಪಂಗಡದವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ಬೆಂಕಿ ಸುಟ್ಟು ಹಾಕಿತು. ಹೀಗೆ ಇಸ್ರಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು.


“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು