Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:50 - ಕನ್ನಡ ಸತ್ಯವೇದವು C.L. Bible (BSI)

50 ಆ ಜನಾಂಗದವರು ಕ್ರೂರಮುಖವುಳ್ಳವರು; ನೀವು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ, ಚಿಕ್ಕವರೆಂದು ಕನಿಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ಕನಿಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆ ಜನಾಂಗದವರು ಕ್ರೂರಮುಖವುಳ್ಳವರು. ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ದಯೆಯೂ ತೋರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:50
12 ತಿಳಿವುಗಳ ಹೋಲಿಕೆ  

“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು.


ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು. ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.


ಜ್ಞಾನಿಗೆ ಸಮಾನರು ಯಾರು? ಅವನಲ್ಲದೆ ಬಗೆಹರಿಸಬಲ್ಲವರು ಯಾರು? ಜ್ಞಾನವು ಮನುಷ್ಯನ ಮುಖವನ್ನು ವಿಕಾಸಗೊಳಿಸುತ್ತದೆ; ಗಂಟುಮೋರೆಯನ್ನು ಮಾರ್ಪಡಿಸುತ್ತದೆ.


ಅವನನ್ನು ಬಿಗಿಹಿಡಿದು ಮುದ್ದಾಡುತ್ತಾಳೆ. ಲಜ್ಜೆಗೆಟ್ಟ ಮೋರೆಯುಳ್ಳ ಅವಳು ಹೀಗೆನ್ನುತ್ತಾಳೆ:


ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಡುವರು. ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನಕುರಿಗಳ ಸಂತಾನವನ್ನಾಗಲಿ, ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನಿಮಗೆ ತಿಳಿಯಲಾಗದ ಅನ್ಯಭಾಷೆಯನ್ನು, ನೀವು ಗ್ರಹಿಸಲಾಗದ ಅಸ್ಪಷ್ಟ ಮಾತುಗಳನ್ನು ಆಡುವ ಅಹಂಕಾರದ ಜನರನ್ನು ಇನ್ನು ಮೇಲೆ ಕಾಣಲಾರಿರಿ.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು