Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:52 - ಕನ್ನಡ ಸತ್ಯವೇದವು C.L. Bible (BSI)

52 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 “ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ನಿಮ್ಮ ದೇಶದಲ್ಲೆಲ್ಲಾ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ಮುತ್ತಿಗೆ ಹಾಕುವರು. ನೀವು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿಮ್ಮ ಗೋಡೆಗಳನ್ನು ಕೆಡವಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:52
25 ತಿಳಿವುಗಳ ಹೋಲಿಕೆ  

ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.


“ನಾನು ಜೆರುಸಲೇಮನ್ನು ಮದ್ಯದ ಬುಡ್ಡಿಯನ್ನಾಗಿ ಮಾಡುವೆನು. ಅದರ ಸುತ್ತಮುತ್ತಲಿರುವ ರಾಷ್ಟ್ರಗಳು ಆ ಬುಡ್ಡಿಯಿಂದ ಕುಡಿದು ಮತ್ತರಾಗಿ, ಅತ್ತಿತ್ತ ಓಲಾಡುವರು. ಜೆರುಸಲೇಮಿಗೆ ಅವರು ಮುತ್ತಿಗೆ ಹಾಕುವಾಗ ಜುದೇಯವೆಲ್ಲವೂ ಇಕ್ಕಟ್ಟಿಗೆ ಒಳಗಾಗುವುದು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಬಾಬಿಲೋನಿಯದವರು ಪುನಃ ಬಂದು ಈ ನಗರದ ಮೇಲೆ ದಾಳಿ ನಡೆಸುವರು. ಇದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಹಾಕುವರು.’


ಏಕೆಂದರೆ ಸರ್ವೇಶ್ವರ ನುಡಿವ ಮಾತಿದು : “ಇಗೋ, ಈ ಸಾರಿ ಈ ನಾಡಿನ ನಿವಾಸಿಗಳನ್ನು ಕವಣೆಯ ಕಲ್ಲಂತೆ ಎಸೆದುಬಿಡುವೆನು; ಬುದ್ಧಿಬರಲೆಂದು ಅವರನ್ನು ಬಾಧಿಸುವೆನು.”


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಡುವರು. ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನಕುರಿಗಳ ಸಂತಾನವನ್ನಾಗಲಿ, ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ಮರುದಿನ ನಾನು ಈಕೆಗೆ, ‘ಈ ದಿನ ನಿನ್ನ ಮಗನನ್ನು ತೆಗೆದುಕೊಂಡು ಬಾ; ಅವನನ್ನು ಕೊಂದು ತಿನ್ನೋಣ,’ ಎಂದಾಗ ಈಕೆ ಅವನನ್ನು ಎಲ್ಲಿಯೋ ಅಡಗಿಸಿಬಿಟ್ಟಳು,” ಎಂದು ಹೇಳಿದಳು.


ಮುತ್ತಿಗೆಗೆ ತುತ್ತಾದ ಜನತೆಯೇ, ಗಂಟು ಕಟ್ಟಿಕೊಂಡು ನಾಡುಬಿಟ್ಟು ನಡೆ.


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು