Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:53 - ಕನ್ನಡ ಸತ್ಯವೇದವು C.L. Bible (BSI)

53 “ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಎಂಥ ಇಕ್ಕಟ್ಟಿಗೆ ಸಿಕ್ಕಿಸುವರೆಂದರೆ, ನೀವು ನಿಮ್ಮ ಸಂತಾನವನ್ನೇ, ಅಂದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಮತ್ತು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವದರಿಂದ ನೀವು ನಿಮ್ಮ ಸಂತಾನವನ್ನೇ ಅಂದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಗಂಡು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ವೈರಿಗಳು ನಿಮ್ಮ ಪಟ್ಟಣವನ್ನು ಮುತ್ತಿಗೆ ಹಾಕಿದಾಗ ನೀವು ಸಂಕಟ ಅನುಭವಿಸುವಿರಿ. ಆಗ ನೀವು ಊಟಕ್ಕೆ ಇಲ್ಲದೆ ತೊಂದರೆಗೊಳಗಾಗುವಿರಿ; ಹಸಿವು ತಾಳಲಾರದೆ ನಿಮ್ಮ ಮಕ್ಕಳನ್ನೇ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಗರ್ಭದ ಫಲವನ್ನು ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:53
11 ತಿಳಿವುಗಳ ಹೋಲಿಕೆ  

ಕರುಣಾಮಯಿಗಳಾದ ಹೆಂಗಳೆಯರು ತಮ್ಮ ಕಂದಮ್ಮಗಳನ್ನು ಸ್ವಂತ ಕೈಯಿಂದ ಬೇಯಿಸಿದರು. ನನ್ನ ಜನರ ಪರಿವಿನಾಶದ ಕಾಲದೊಳು ತಮ್ಮ ತಾಯಿಗಳಿಗೆ ತಿಂಡಿಯಾದರು ಆ ಹಸುಳೆಗಳು.


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


ಅವರ ಶತ್ರುಗಳು, ಕೊಲೆಗಡುಕರು ಅವರನ್ನು ಮುತ್ತಿ ನಸುಕುವಾಗ ಒಬ್ಬರು ಮತ್ತೊಬ್ಬರನ್ನು ತಿನ್ನುವುದು ಮಾತ್ರವಲ್ಲ, ತಮ್ಮ ಪುತ್ರಪುತ್ರಿಯರ ಮಾಂಸವನ್ನೇ ತಿನ್ನುವರು.’


ನೀವು ನಿಮ್ಮ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಹಾಗೂ ಹಾಲೂಡಿಸುವ ತಾಯಂದಿರ ಗೋಳೇನು!


ನಿಮ್ಮ ಸಂತಾನಗಳಿಗೆ, ವ್ಯವಸಾಯಗಳಿಗೆ, ಹಾಗು ದನಕುರಿಗಳಿಗೆ ಅಶುಭ ಉಂಟಾಗುವುದು.


ಶತ್ರುಗಳು ನಿಮ್ಮ ಪಟ್ಟಣಗಳಿಗೆಲ್ಲಾ ಮುತ್ತಿಗೆ ಹಾಕಿ, ನಿಮ್ಮನ್ನು ಭೀಕರವಾದ ಬಿಕ್ಕಟ್ಟಿಗೆ ಸಿಕ್ಕಿಸುವರು. ಆಗ ನಿಮ್ಮಲ್ಲಿ ಮೃದುಸ್ವಭಾವಿ ಹಾಗು ಅತಿ ಸುಕುಮಾರ ಆದವನೂ ಕೂಡ ತನಗೇ ತಿನ್ನಲಿಕ್ಕೆ ಏನೂ ಉಳಿಯದೆ, ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು, ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಸಿಂಡರಿಸಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು