Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:60 - ಕನ್ನಡ ಸತ್ಯವೇದವು C.L. Bible (BSI)

60 ನೀವು ಅಂಜಿಕೊಳ್ಳುತ್ತಿದ್ದ ಈಜಿಪ್ಟ್ ದೇಶದ ರೋಗಗಳನ್ನೆಲ್ಲ ಮತ್ತೆ ನಿಮ್ಮ ಮೇಲೆ ಬರಮಾಡುವರು; ಅವು ನಿಮಗೆ ಅಂಟಿಕೊಂಡೇ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ನೀವು ಅಂಜಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರಿಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಹತ್ತಿಕೊಂಡೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ನೀವು ಈಜಿಪ್ಟಿನಲ್ಲಿರುವಾಗ ದೇವರು ಅವರಿಗೆ ಕಳುಹಿಸಿದ ವ್ಯಾಧಿಸಂಕಟಗಳನ್ನು ನೋಡಿ ಭಯಗ್ರಸ್ತರಾದಿರಿ. ಅಂಥ ಸಂಕಟಗಳು ನಿಮಗೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಇದಲ್ಲದೆ ನೀವು ಹೆದರಿಕೊಳ್ಳುತ್ತಿದ್ದ ಈಜಿಪ್ಟಿನ ರೋಗಗಳನ್ನೆಲ್ಲಾ ದೇವರು ತಿರುಗಿ ನಿಮ್ಮ ಮೇಲೆ ಬರಮಾಡುವರು; ಅವು ನಿಮ್ಮನ್ನು ಅಂಟಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:60
6 ತಿಳಿವುಗಳ ಹೋಲಿಕೆ  

ನಿಮಗೆ ಯಾವ ವ್ಯಾಧಿಯೂ ತಗಲದಂತೆ ಸರ್ವೇಶ್ವರ ನೋಡಿಕೊಳ್ಳುವರು. ನೀವೇ ಅನುಭವದಿಂದ ಅರಿತಿರುವಂತೆ ಈಜಿಪ್ಟ್ ದೇಶದಲ್ಲಿ ಪ್ರಬಲ ಆಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸಲಿಲ್ಲ; ಅವುಗಳನ್ನು ನಿಮ್ಮ ದ್ವೇಷಿಗಳ ಮೇಲೆ ಮಾತ್ರ ಬರಮಾಡುವರು.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


“ಈಜಿಪ್ಟರನ್ನು ಬಾಧಿಸಿದಂತೆ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಸರ್ವೇಶ್ವರ ನಿಮ್ಮನ್ನು ಬಾಧಿಸುವರು.


ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು