Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:10 - ಕನ್ನಡ ಸತ್ಯವೇದವು C.L. Bible (BSI)

10 “ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲ್ ಪುರುಷರೇ, ನೀವೆಲ್ಲರೂ ಈಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ ಪುರುಷರೇ, ನಿಮ್ಮ ಪ್ರಧಾನರು, ಗೋತ್ರದವರು, ಹಿರಿಯರು, ಅಧಿಕಾರಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈ ದಿನ ನೀವೆಲ್ಲರೂ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ನಾಯಕರು, ಹಿರಿಯರು, ನಿಮ್ಮ ಜನರೆಲ್ಲಾ ಇಲ್ಲಿ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವೆಲ್ಲರು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ಗೋತ್ರಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಜನರೆಲ್ಲರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:10
18 ತಿಳಿವುಗಳ ಹೋಲಿಕೆ  

ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.


ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನ ಪರಿಚಾರಕರು, ಉಳಿದ ಜನರು, ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು, ತಮ್ಮ ತಮ್ಮ ಹೆಂಡತಿಯರು, ಗ್ರಹಿಸಲು ಶಕ್ತರಾದ ಗಂಡುಹೆಣ್ಣು ಮಕ್ಕಳು ಇವರೊಡನೆ ಬಂದು,


ಈ ಎಲ್ಲ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಮುಖಂಡರು, ಲೇವಿಯರು ಹಾಗು ಯಾಜಕರು ಸಹಿಮಾಡಿ, ಮುದ್ರೆಹಾಕಿದರು.


ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.


ಅನಂತರ ಯೆಹೋಯಾದನು ಎಲ್ಲ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಸರ್ವೇಶ್ವರನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.


ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು.


ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡೆಸುವ ಕೆಲಸಕಾರ್ಯಗಳಲ್ಲಿ ಜಾಣರಾಗಿ ಅಭಿವೃದ್ಧಿ ಹೊಂದುವಿರಿ.


ಗೋತ್ರದವರು, ಹಿರಿಯರು, ಅಧಿಕಾರಿಗಳು, ಹೆಂಗಸರು, ಮಕ್ಕಳು ನಿಮ್ಮ ಪಾಳೆಯದಲ್ಲಿ ಇರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ ಮಕ್ಕಳಿಗೂ ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ಆದರೆ ನಮ್ಮ ಜನರಿಗೆ ಅವರು ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.


ಸರ್ವೇಶ್ವರ, ಶಿಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ದೈವವಾಣಿಯ ಮೂಲಕ ಸಮುವೇಲನಿಗೆ ತಮ್ಮನ್ನೇ ಶೃತಪಡಿಸುತ್ತಾ ಬಂದರು. ಇಸ್ರಯೇಲರೆಲ್ಲರಿಗೆ ಸಮುವೇಲನು ಸರ್ವೇಶ್ವರನ ವಚನಗಳನ್ನು ತಿಳಿಸುತ್ತಾ ಇದ್ದನು.


ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.


ಎಲ್ಲ ಯೆಹೂದ್ಯರೂ ಅವರ ಮಡದಿಮಕ್ಕಳೂ ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು