Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:19 - ಕನ್ನಡ ಸತ್ಯವೇದವು C.L. Bible (BSI)

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:19
33 ತಿಳಿವುಗಳ ಹೋಲಿಕೆ  

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.


ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.


ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ಸಿರಿಬಂದಾಗ ಕೊರತೆಯಿರದು ಹೊಗಳಿಕೆಗೆ I ಆತ್ಮಸ್ತುತಿ, ಮುಖಸ್ತುತಿ, ಇವುಗಳ ಮೆರೆತಕೆ II


ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಊರುಗಳೊಂದರಲ್ಲಿ ಒಬ್ಬ ಪುರುಷ ಅಥವಾ ಸ್ತ್ರೀ ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನೆಯನ್ನು ಮೀರಿದ್ದಾರೆ ಎಂದೂ,


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’


ಇಗೋ, ನಿಮಗೆ ಒಳಿತನ್ನು ಅಲ್ಲ, ಕೇಡನ್ನು ಬರಮಾಡಬೇಕೆಂದು ನಿಮ್ಮ ವಿಷಯದಲ್ಲಿ ಎಚ್ಚರಗೊಂಡಿದ್ದೇನೆ. ಈಜಿಪ್ಟಿನ ಎಲ್ಲ ಯೆಹೂದ್ಯರು ಖಡ್ಗ-ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.


“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


“ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II


“ಆದರೆ ಅವರು, ‘ಇದೆಲ್ಲ ಹೇಳಿ ಏನು ಪ್ರಯೋಜನವಿಲ್ಲ; ನಾವು ನಮ್ಮ ಆಲೋಚನೆ ಪ್ರಕಾರ ನಡೆಯುತ್ತೇವೆ. ನಮ್ಮಲ್ಲಿ ಪ್ರತಿಯೊಬ್ಬರು ನಮ್ಮ ನಮ್ಮ ಹೃದಯದ ಚಟದಂತೆಯೇ ನಡೆಯುತ್ತೇವೆ’ ಎಂದು ಹೇಳುವರು.”


ಅದೂ ಅಲ್ಲದೆ ಜುದೇಯದ ಅರಸ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು: ‘ಸರ್ವೇಶ್ವರ ಹೀಗೆಂದಿದ್ದಾರೆ - ಬಾಬಿಲೋನಿನ ಅರಸನು ಬಂದು ಈ ನಾಡನ್ನು ಜನ ಅಥವಾ ಜಾನುವಾರುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಈ ಸುರುಳಿಯಲ್ಲಿ ಬರೆಸಿದ್ದು ಏಕೆ ಎಂದು ಪ್ರಶ್ನಿಸಿ, ಆಕ್ಷೇಪಿಸಿ ಅದನ್ನು ನೀನು ಸುಟ್ಟುಬಿಟ್ಟಿಯಲ್ಲವೆ?


“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು:


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


“ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು.


ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು