Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20-21 ಯೆಹೋವನು ಆ ಮನುಷ್ಯನನ್ನು ಕ್ಷಮಿಸುವುದಿಲ್ಲ. ಅವನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸುವನು. ಅವನನ್ನು ಇಸ್ರೇಲ್ ಕುಲಗಳಿಂದ ತೆಗೆದುಹಾಕುವನು. ಈ ಪುಸ್ತಕದಲ್ಲಿ ಬರೆದ ಎಲ್ಲಾ ಶಾಪಗಳಿಂದ ಬಾಧಿಸಿ ನಾಶಪಡಿಸುವನು. ಈ ಬೋಧನಾ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಗೆ ಅದು ಸೇರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:20
41 ತಿಳಿವುಗಳ ಹೋಲಿಕೆ  

ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಇವರು ನನ್ನ ಆಜ್ಞೆಗೆ ಬಗ್ಗದವರು. ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವೊಂದು ನಿನ್ನಿಂದುಂಟಾಗುವಂತೆ ಮಾಡುವೆನು,’ ಎಂದು ಹೇಳಿದರು.


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು; ನಿನ್ನ ಮೂಗುಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ದೇವರು ಹುಟ್ಟುರೆಂಬೆಗಳನ್ನೇ ಉಳಿಸಲಿಲ್ಲ ಎಂದಮೇಲೆ ನಿನ್ನನ್ನು ಉಳಿಸುವರೆಂದು ತಿಳಿಯುವೆಯಾ?


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ಆಗ ಅವರು ನನಗೆ, “ನರಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದಲ್ಲಿ ಪ್ರವೇಶದ್ವಾರದ ಮುಂದೆ ನಿಂತಿತ್ತು.


ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.


ಏಕೆಂದರೆ, ಅವಳ ಪತಿಗಾಗುವ ಮತ್ಸರ ಉದ್ರೇಕಗೊಳ್ಳುವುದು; ಕನಿಕರ ತೋರನು, ಮುಯ್ಯಿ ತೀರಿಸುವ ದಿನದಂದು.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ತೂಬೆತ್ತಿಬಿಟ್ಟನು ತನ್ನ ಕ್ರೋಧಕೆ I ತುತ್ತಾಗಿಸಿದನು ದೇಹಗಳನು ಜಾಡ್ಯಕೆ I ಅಡ್ಡಿತರಲಿಲ್ಲ ಆತನು ಅವರ ಮರಣಕೆ II


ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II


ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II


ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.


“ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು.


ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II


ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು